Advertisement

ಕೊಚ್ಚೆ ನೀರು ನಿಲ್ಲದಂತೆ ಎಚ್ಚರ ವಹಿಸಿ

05:04 PM May 18, 2022 | Team Udayavani |

ರಾಯಚೂರು: ಸ್ವಚ್ಛತೆಯನ್ನು ನಮ್ಮ ಮನೆಯಿಂದಲೇ ಆರಂಭಿಸಬೇಕು ಮತ್ತು ಮನೆಯ ಸುತ್ತ ಮುತ್ತ ನೀರು ನಿಲ್ಲದಂತೆ ನೋಡಿಕೊಂಡರೆ ಸೊಳ್ಳೆಗಳು ಉತ್ಪತ್ತಿಯಾಗುವುದಿಲ್ಲ. ಇದರಿಂದ ಡೆಂಘೀ ಉತ್ಪಾದನೆ ತಡೆಯಬಹುದು ಎಂದು ವೈದ್ಯಾಧಿಕಾರಿ ಡಾ| ಸತೀಶ ಹೇಳಿದರು.

Advertisement

ತಾಲೂಕಿನ ಮಟಮಾರಿ ಗ್ರಾಪಂ ಸಭಾಂಗಣದಲ್ಲಿ ಸೊಮವಾರ ಏರ್ಪಡಿಸಿದ್ದ ರಾಷ್ಟ್ರೀಯ ಡೆಂಘೀ ದಿನಾಚರಣೆ ನಿಮಿತ್ತ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಎಲ್ಲ ಸರ್ಕಾರಿ ಆಸ್ಪತ್ರೆಯಲ್ಲಿ ಡೆಂಘೀ ರಕ್ತ ಪರೀಕ್ಷೆ ಮತ್ತು ಚಿಕಿತ್ಸೆ ಉಚಿತವಾಗಿ ಮಾಡಲಾಗುತ್ತದೆ. ಸೂಕ್ತ ಸ್ವಯಂ ರಕ್ಷಣಾ ವಿಧಾನಗಳನ್ನು ಅನುಸರಿಸಬೇಕು ಎಂದರು.

ಗ್ರಾಪಂ ಅಧ್ಯಕ್ಷ ರಾಚಪ್ಪಗೌಡ, ಕ್ಷೇತ್ರ ಶಿಕ್ಷಣಾಧಿಕಾರಿ ನಾಗರಾಜ, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಟಿ. ವಸಂತರಾವ್‌, ಯಲ್ಲಾಲಿಂಗ, ಪ್ರಾಥಮಿಕ ಆರೋಗ್ಯ ನಿರೀಕ್ಷಣಾಧಿಕಾರಿ ವಿಜಯಲಕ್ಷ್ಮೀ, ಆರೋಗ್ಯ ಕೇಂದ್ರದ ಸಿಬ್ಬಂದಿ, ಅಂಗನವಾಡಿ, ಆಶಾ ಕಾರ್ಯಕರ್ತೆಯರು ಹಾಗೂ ಗ್ರಾಮಸ್ಥರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next