Advertisement

ಒಡಿಯೂರು ಶ್ರೀ ಜನ್ಮದಿನೋತ್ಸವ : ಕೇಪು ಗ್ರಾಮದಲ್ಲಿ ಸ್ವಚ್ಛತೆ

03:25 AM Jul 05, 2017 | Karthik A |

ವಿಟ್ಲ: ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿಯವರ ಜಯಂತ್ಯುತ್ಸವ (ಗ್ರಾಮೋತ್ಸವ)ದ ಅಂಗವಾಗಿ ಕುದ್ದುಪದವು ಪೇಟೆ ವಠಾರದಲ್ಲಿ ಸ್ವಚ್ಛತಾ ಕಾರ್ಯಕ್ರಮ ನಡೆಯಿತು. ಕೇಪು ಗ್ರಾಮ ಪಂಚಾಯತ್‌ ಅಧ್ಯಕ್ಷ ತಾರಾನಾಥ ಆಳ್ವ ಉದ್ಘಾಟಿಸಿ ಮಾತನಾಡಿ, ಪ್ರತಿಯೊಬ್ಬರು ಸ್ವಚ್ಛತೆಯ ಬಗ್ಗೆ ಗಮನ ಹರಿಸಿದರೆ ಸ್ವಚ್ಛ ಭಾರತ ಆಗುವುದರಲ್ಲಿ ಸಂದೇಹವಿಲ್ಲ ಎಂದರು.

Advertisement

ದಿವ್ಯಶಕ್ತಿ ಯುವಕ ಮಂಡಲದ ಅಧ್ಯಕ್ಷ ಸತೀಶ್‌, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಮಹಾಲಿಂಗ ಪಾಟಾಳಿ, ಘಟಸಮಿತಿ ಅಧ್ಯಕ್ಷೆ ಹರಿಣಾಕ್ಷಿ, ಉಪಾಧ್ಯಕ್ಷೆ ಸುರೇಖಾ, ಸಂಘಟನ ಕಾರ್ಯದರ್ಶಿ ಶಾರದಾ ಉಪಸ್ಥಿತರಿದ್ದು ಶುಭಹಾರೈಸಿದರು. ವಿಕಾಸವಾಹಿನಿ ಸದಸ್ಯೆ ಜಯಂತಿ ಸ್ವಾಗತಿಸಿ, ಘಟಸಮಿತಿಯ ನಿಕಟಪೂರ್ವ ಅಧ್ಯಕ್ಷೆ ಕಮಲಾ ವಂದಿಸಿದರು. ಯೋಜನೆಯ ಕೇಪು ಗ್ರಾಮದ ಸೇವಾದೀಕ್ಷಿತೆ ಪುಷ್ಪಾ ಕಾರ್ಯಕ್ರಮ ನಿರೂಪಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next