Advertisement
ಹಲವು ವರ್ಷಗಳ ಹಿಂದೆ ಚಂದ್ರನಗರ – ಪಾದೂರು ಬಳಿ ದಾನಿಗಳ ಸಹಾಯದಿಂದ ಕಟ್ಟಿಸಿದ ಈ ಬಸ್ ನಿಲ್ದಾಣ ವಿಪರೀತ ಕಳೆ, ಪಾಚಿಗಳಿಂದ ಕೂಡಿದ್ದು, ಪ್ರಯಾಣಿಕರು ಬಸ್ ನಿಕ್ದಾಣದಲ್ಲಿ ಕುಳಿತುಕೊಳ್ಳಲೂ ಅಸಹ್ಯ ಪಡುವಂತಾಗಿತ್ತು.
Related Articles
Advertisement
ಪ್ರಧಾನಿ ನರೇಂದ್ರ ಮೋದಿ ಅವರ ಹೆಸರಿನಲ್ಲಿ ದೇಶದ್ಯಾಂತ ಬಿಜೆಪಿ ಕಾರ್ಯಕರ್ತರು ಹಳ್ಳಿ ಹಳ್ಳಿಗಳಲ್ಲಿ ಈ ರೀತಿಯ ಚಟುವಟಿಕೆಗಳನ್ನು ನಡೆಸುತ್ತಿದ್ದು, ನಮ್ಮಂತಹ ಕಾರ್ಯಕರ್ತರಿಗೆ ಇದು ಹೆಮ್ಮೆಯ ವಿಚಾರವಾಗಿದೆ. ಮತ್ತಷ್ಟು ಕೆಲಸ ಮಾಡಲು ಇಂತಹ ಕೆಲಸಗಳೇ ಸ್ಫೂರ್ತಿಯಾಗಿದೆ ಎಂದು ಯುವಮೋರ್ಚಾ ಉಪಾಧ್ಯಕ್ಷ ಪ್ರಕಾಶ್ ಆಚಾರ್ಯ ತಿಳಿಸಿದ್ದಾರೆ.
ಯುವಕರ ಶ್ರಮಾಧಾನ ಕೆಲಸವನ್ನು ತಿಳಿದ ಬಿಜೆಪಿ ಕ್ಷೇತ್ರಾಧ್ಯಕ್ಷ ಶ್ರೀಕಾಂತ್ ನಾಯಕ್ ಅವರು ಸ್ಥಳಕ್ಕೆ ತೆರಳಿ, ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಇಂತಹ ಮತ್ತಷ್ಟು ಸೇವೆ ಮತ್ತು ಸಮರ್ಪಣೆ ಸಮಾಜ ಕ್ಕಾಗಿ ಮಾಡಬೇಕೆಂದು ವಿನಂತಿಸಿದ್ದಾರೆ.