Advertisement
ಮಾನ್ಸೂನ್ ಗ್ಯಾಂಗ್ ಕಾರ್ಯಪ್ರವೃತ್ತಪ್ರತಿವರ್ಷ ಮೇ ತಿಂಗಳಲ್ಲಿ ಮೆಸ್ಕಾಂ ವಿದ್ಯುತ್ ತಂತಿಗೆ ಬೀಳುವ ಸ್ಥಿತಿಯಲ್ಲಿರುವ, ತಾಗಿಕೊಂಡಿರುವ ಎಲ್ಲ ಮರಗಳ ರೆಂಬೆಗಳನ್ನು ತೆರವುಗೊಳಿಸುತ್ತದೆ. ಅದಕ್ಕಾಗಿ ಹೆಚ್ಚಿನ ಸಿಬಂದಿ ಆವಶ್ಯಕತೆ ಇದ್ದು, ಮೆಸ್ಕಾಂ ಕೇಂದ್ರ ಕಚೇರಿಯಿಂದ ಈ ಕಾರ್ಯಕ್ಕೆ ಮಾನ್ಸೂನ್ ಗ್ಯಾಂಗ್ನ್ನು ಕಳುಹಿಸಿಕೊಡಲಾಗುತ್ತದೆ. ಈ ಬಾರಿ ಕೇಂದ್ರ ಕಚೇರಿಯಿಂದ ಎರಡು ತಾಲೂಕುಗಳಿಗೆ 54 ಮಂದಿಯನ್ನು ಕಳುಹಿಸಿಕೊಟ್ಟಿದ್ದಾರೆ. ಈ ಸಿಬಂದಿ ವಿಭಾಗದಲ್ಲಿರುವ ರೆಗ್ಯುಲರ್ ಸಿಬಂದಿ ಜತೆ ಸೇರಿ ರೆಂಬೆಗಳ ತೆರವು ಕಾರ್ಯ ನಡೆಸುತ್ತಾರೆ. ಅಪಾಯಕಾರಿ ರೆಂಬೆಗಳನ್ನು ಯಂತ್ರಗಳ ಮೂಲಕ, ಮಾನವ ಶ್ರಮದ ಮೂಲಕವೂ ತೆರವುಗೊಳಿಸಲಾಗುತ್ತದೆ. ರೆಂಬೆ ಕಡಿಯುವುದಕ್ಕೆ ಆಯಾಯ ಊರಿನವರು ಕೂಡ ಸಹಕಾರ ನೀಡುತ್ತಾರೆ ಎಂದು ಮೆಸ್ಕಾಂ ಅಧಿಕಾರಿಗಳು ಹೇಳುತ್ತಾರೆ.
ಮಳೆಗಾಲದಲ್ಲಿ ಗಾಳಿ-ಮಳೆಗೆ ಹಾನಿಯಾದರೆ ಅವುಗಳ ದುರಸ್ತಿ ಕಾರ್ಯಗಳನ್ನು ನಡೆಸುವುದಕ್ಕೆ ತಿರುಗಾಡಲು ಈ ಬಾರಿ ಬಂಟ್ವಾಳ ವಿಭಾಗಕ್ಕೆ ಮೂರು ವಾಹನಗಳನ್ನು ಕೂಡ ಮೆಸ್ಕಾಂ ನೀಡಿದೆ. ಹೆಚ್ಚುವರಿ ಕಂಬಗಳು, ಮೆಟೀರಿಯಲ್ಗಳನ್ನೂ ಕೂಡ ಬಂಟ್ವಾಳ ವಿಭಾಗದಲ್ಲಿ ಸ್ಟಾಕ್ ಇಟ್ಟುಕೊಳ್ಳಲಾಗಿದೆ. ಎಲ್ಲ ರೀತಿಯಲ್ಲೂ ಸನ್ನದ್ಧ
ವಿದ್ಯುತ್ ತಂತಿಗಳಿಗೆ ಅಡಚಣೆಯಾಗುವ ಮರಗಳ ರೆಂಬೆಗಳ ತೆರವು ಕಾರ್ಯ ಈಗಾಗಲೇ ನಡೆಯುತ್ತಿದೆ. ಮಳೆಯಿಂದ ವಿದ್ಯುತ್ ಪೂರೈಕೆಗೆ ಹಾನಿಯಾದರೆ, ಅವುಗಳ ದುರಸ್ತಿ ಮೆಸ್ಕಾಂ ಎಲ್ಲ ರೀತಿಯಲ್ಲೂ ಸನ್ನದ್ಧವಾಗಿದೆ. ಈ ಬಾರಿ ಮಳೆಯಿಂದ ತೊಂದರೆ ಆದಾಗ ಒಂದೂವರೆ ದಿನದಲ್ಲಿ ದುರಸ್ತಿ ಕಾರ್ಯ ನಡೆಸಿಕೊಟ್ಟಿದ್ದೇವೆ.
– ರಾಮಚಂದ್ರ ಎಂ., ಕಾರ್ಯನಿರ್ವಾಹಕ ಎಂಜಿನಿಯರ್, ಮೆಸ್ಕಾಂ ಬಂಟ್ವಾಳ