Advertisement

ಧಾರ್ಮಿಕ ಕೇಂದ್ರಗಳ ತೆರವು: ಸ್ವಯಂಪ್ರೇರಿತ ಅರ್ಜಿ ದಾಖಲು

10:50 PM Jun 28, 2019 | Team Udayavani |

ಬೆಂಗಳೂರು: ರಾಜ್ಯದಲ್ಲಿ ರಸ್ತೆ, ಉದ್ಯಾನವನ ಸೇರಿ ಸಾರ್ವಜನಿಕ ಸ್ಥಳಗಳನ್ನು ಒತ್ತುವರಿ ಮಾಡಿಕೊಂಡು ಕಟ್ಟಲಾಗಿರುವ ದೇವಸ್ಥಾನ, ಮಸೀದಿ, ಚರ್ಚ್‌ ಹಾಗೂ ಗುರುದ್ವಾರಗಳು ಸೇರಿ ಧಾರ್ಮಿಕ ಶ್ರದ್ಧಾ ಕೇಂದ್ರಗಳ ಕಟ್ಟಡಗಳನ್ನು ತೆರವುಗೊಳಿಸುವ ವಿಚಾರವಾಗಿ ಖುದ್ದು ಹೈಕೋರ್ಟ್‌ ಸ್ವಯಂಪ್ರೇರಿತ ಅರ್ಜಿ ದಾಖಲಿಸಿಕೊಂಡಿದೆ.

Advertisement

ಸಾರ್ವಜನಿಕ ಪ್ರದೇಶಗಳಲ್ಲಿರುವ ಅನಧಿಕೃತ ಧಾರ್ಮಿಕ ಕಟ್ಟಡಗಳನ್ನು ತೆರವುಗೊಳಿಸಲು ಸುಪ್ರೀಂಕೋರ್ಟ್‌ ನೀಡಿರುವ ತೀರ್ಪನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಲು ಮುಖ್ಯ ನ್ಯಾಯಮೂರ್ತಿಗಳ ಆದೇಶದ ಮೇರೆಗೆ ಹೈಕೋರ್ಟ್‌ ರಿಜಿಸ್ಟ್ರಾರ್‌ ಜನರಲ್‌ ವಿ. ಶ್ರೀಶಾನಂದ ಅವರು ಈ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದು, ಅರ್ಜಿಯು ಇನ್ನಷ್ಟೇ ವಿಚಾರಣೆಗೆ ಬರಬೇಕಿದೆ.

ಅರ್ಜಿಯಲ್ಲಿ ರಾಜ್ಯ ಸರ್ಕಾರ, ಧಾರ್ಮಿಕ ದತ್ತಿ ಹಾಗೂ ಮುಜರಾಯಿ ಇಲಾಖೆ ಆಯುಕ್ತ, ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಬಿಬಿಎಂಪಿ ಆಯುಕ್ತರು ಮತ್ತು ವಿಶೇಷ ಆಯುಕ್ತರನ್ನು ಪ್ರತಿವಾದಿಗಳನ್ನಾಗಿ ಮಾಡಲಾಗಿದೆ. ರಾಜ್ಯದಲ್ಲಿನ ಅನಧಿಕೃತ ಧಾರ್ಮಿಕ ಕಟ್ಟಡಗಳನ್ನು ತೆರವುಗೊಳಿಸುವ ಕುರಿತು 2018ರ ಜ.31ರಂದು ಸುಪ್ರೀಂಕೋರ್ಟ್‌ ನೀಡಿರುವ ತೀರ್ಪು ಪಾಲಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next