Advertisement

ನೀರಸಾಗರ ಜಲಾಶಯ ಒತ್ತುವರಿ ತೆರವು

12:49 PM Jul 05, 2019 | Suhan S |

ಹುಬ್ಬಳ್ಳಿ: ಮಹಾನಗರಕ್ಕೆ ನೀರು ಪೂರೈಸುವ ನೀರಸಾಗರ ಜಲಾಶಯದ ಜಲಾನಯನ ಪ್ರದೇಶದ ಒತ್ತುವರಿ ತೆರವು ಕಾರ್ಯ ಜಿಲ್ಲಾಡಳಿತದಿಂದ ಗುರುವಾರ ನಡೆಯಿತು.

Advertisement

ಕೆರೆ ಭಾಗದ ಭೂಮಿ ಒತ್ತುವರಿಯಾಗಿದ್ದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ದೀಪಾ ಚೋಳನ್‌ ತೆರವುಗೊಳಿಸುವಂತೆ ಸೂಚನೆ ನೀಡಿದ್ದರು. ಉಪವಿಭಾಗಾಧಿಕಾರಿ ಮಹ್ಮದ್‌ ಜುಬೇರ ನೇತೃತ್ವದಲ್ಲಿ ವಿವಿಧ ಇಲಾಖೆ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಸುಮಾರು 23.5 ಎಕರೆ ಭೂಮಿಯನ್ನು ತಮ್ಮ ಸುಪರ್ದಿಗೆ ಪಡೆದಿದ್ದಾರೆ. ವಶಪಡಿಸಿಕೊಂಡಿರುವ ಭೂಮಿಯ ಸುತ್ತಲೂ ಟ್ರಂಚ್ ಕೊರೆಸಲಾಗಿದೆ.

ತೆರವುಗೊಳಿಸಿದ ಭೂಮಿಯಲ್ಲಿ ತಂತಿ ಬೇಲಿ ಹಾಕಿ ಒತ್ತುವರಿಯಾಗದಂತೆ ಕ್ರಮ ಕೈಗೊಳ್ಳಲಾಗುವುದು. ಜಲಾಶಯದ ಭೂಮಿಯನ್ನು ಒತ್ತುವರಿ ಮಾಡಿಕೊಳ್ಳಬಾರದು ಎಂದು ಜನರಿಗೆ ಸೂಚನೆ ನೀಡಲಾಗಿದೆ. ಇದೀಗ ತೆರವುಗೊಳಿಸಿದ ಭೂಮಿ ಸೇರಿದಂತೆ ಜಲಾನಯನ ಪ್ರದೇಶದಲ್ಲಿ ಸಸಿಗಳನ್ನು ನೆಡುವುದಾಗಿ ಉಪವಿಭಾಗಾಧಿಕಾರಿ ಮಹ್ಮದ್‌ ಜುಬೇರ ತಿಳಿಸಿದ್ದಾರೆ. ಧಾರವಾಡ ತಹಶೀಲ್ದಾರ್‌ ಪ್ರಕಾಶ ಕುದರಿ, ಕಲಘಟಗಿ ತಹಶೀಲ್ದಾರ ಅಶೋಕ ಶಿಗ್ಗಾವಿ, ನಗರ ನೀರು ಸರಬರಾಜು ಮಂಡಳಿ, ಅರಣ್ಯ, ನೀರಾವರಿ ಇಲಾಖೆ ಅಧಿಕಾರಿಗಳಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next