Advertisement

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

03:35 PM Apr 29, 2024 | Team Udayavani |

ರಾಜಸ್ಥಾನ: ಮೂವರು ಮುಸುಕುಧಾರಿ ದುಷ್ಕರ್ಮಿಗಳು ಮಸೀದಿಯ ಧರ್ಮಗುರುವನ್ನೇ ಹೊಡೆದು ಹತ್ಯೆಗೈದಿರುವ ಘಟನೆ ರಾಜಸ್ಥಾನದ ಅಜ್ಮೀರ್‌ನಲ್ಲಿ ನಡೆದಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.

Advertisement

ಮೊಹಮ್ಮದ್ ಮಹಿರ್(30) ಹತ್ಯೆಯಾದ ವ್ಯಕ್ತಿಯಾಗಿದ್ದು ಪೊಲೀಸರ ಮಾಹಿತಿ ಪ್ರಕಾರ ಶನಿವಾರ ಮುಂಜಾನೆ ಎರಡು ಗಂಟೆಯ ಸುಮಾರಿಗೆ ಮಸೀದಿಯೊಳಗೆ ನುಗ್ಗಿದ ಮುಸುಕುಧಾರಿಗಳು ಧರ್ಮಗುರುಗಳ ಮೇಲೆ ದೊಣ್ಣೆಯಿಂದ ದಾಳಿ ನಡೆಸಿ ಪರಾರಿಯಾಗಿದ್ದಾರೆ. ಘಟನೆ ಸಂಬಂಧ ಆರೋಪಿಗಳ ಪತ್ತೆಗೆ ಕಾರ್ಯಾಚರಣೆ ನಡೆಯುತ್ತಿದ್ದು ಆದಷ್ಟು ಬೇಗ ಆರೋಪಿಗಳನ್ನು ಪತ್ತೆಹಚ್ಚುವುದಾಗಿ ಹೇಳಿದ್ದಾರೆ.

ಮುಸುಕುಧಾರಿಗಳ ದಾಳಿಗೆ ಮಹಿರ್ ಸ್ಥಳದಲ್ಲೇ ಮೃತಪಟ್ಟಿದ್ದು ಘಟನೆ ವೇಳೆ ಆರು ಮಕ್ಕಳು ಜೊತೆಗಿದ್ದರು ಎಂದು ಹೇಳಲಾಗಿದೆ, ಮುಸುಕುಧಾರಿಗಳು ಈ ಆರು ಮಕ್ಕಳಿಗೂ ವಿಚಾರ ಬಹಿರಂಗಪಡಿಸದಂತೆ ಬೆದರಿಕೆ ಹಾಕಿದ್ದಾರೆ ಎಂದು ಹೇಳಲಾಗಿದೆ. ದುಷ್ಕರ್ಮಿಗಳು ಸ್ಥಳದಿಂದ ಪರಾರಿಯಾದ ಬಳಿಕ ಮಕ್ಕಳು ಹೊರಬಂದು ವಿಚಾರ ತಿಳಿಸಿದ್ದಾರೆ.

ಮಾಹಿರ್ ಮಸೀದಿಯಲ್ಲಿ ಮಕ್ಕಳಿಗೆ ಪಾಠಗಳನ್ನು ಮಾಡುತ್ತಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ ಅಲ್ಲದೆ ಕೊಲೆ ಯಾವ ಉದ್ದೇಶಕ್ಕಾಗಿ ನಡೆದಿದೆ ಎಂಬುದು ಆರೋಪಿಗಳ ಪತ್ತೆಯ ಬಳಿಕವೇಗೊತ್ತಾಗಲಿದೆ ಎಂದು ಹೇಳಲಾಗಿದೆ.
ಮಾಹಿರ್ ಅವರ ಕುಟುಂಬ ಸದಸ್ಯರು ಉತ್ತರ ಪ್ರದೇಶದಿಂದ ಬಂದಿದ್ದು ಮೃತದೇಹವನ್ನು ಮರಣೋತ್ತರ ಪರೀಕ್ಷೆ ನಡೆಸಿ ಕುಟುಂಬ ಸದಸ್ಯರಿಗೆ ಹಸ್ತಾಂತರಿಸಿದ್ದಾರೆ.

ಮೊಹಮ್ಮದ್ ಮಹಿರ್ ಎರಡು ದಿನಗಳ ಹಿಂದೆಯಷ್ಟೇ ಅಜ್ಮೀರ್‌ಗೆ ಆಗಮಿಸಿ ಮಕ್ಕಳಿಗೆ ಪಾಠ ಮಾಡುತ್ತಿದ್ದರು ಎಂದು ಸ್ಥಳೀಯ ನಿವಾಸಿಯೊಬ್ಬರು ಹೇಳಿಕೆ ನೀಡಿದ್ದಾರೆ.

Advertisement

ಇದನ್ನೂ ಓದಿ: Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Advertisement

Udayavani is now on Telegram. Click here to join our channel and stay updated with the latest news.

Next