Advertisement

ಕೂದಲೆಳೆ ಅಂತರದಲ್ಲಿ ಪಾರಾದ ಆಂಧ್ರ ಸಿಎಂ; ಪ್ರವಾಹ ವೀಕ್ಷಣೆ ವೇಳೆ ಪಕ್ಕದಲ್ಲೇ ಸಂಚರಿಸಿದ ರೈಲು

03:09 PM Sep 06, 2024 | Team Udayavani |

ಆಂಧ್ರಪ್ರದೇಶ: ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಲು ಬಂದಿದ್ದ ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್.ಚಂದ್ರಬಾಬು ನಾಯ್ಡು ಅವರು ಹಾಗೂ ಅವರ ತಂಡ ಭಾರಿ ಅಪಘಾತದಿಂದ ಪಾರಾಗಿದ್ದಾರೆ.

Advertisement

ಗುರುವಾರ ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಹಾಗೂ ಅವರ ತಂಡ ವಿಜಯವಾಡದ ಬುಡಮೇರು ರೈಲ್ವೆ ಸೇತುವೆಯ ಮೇಲೆ ಪ್ರವಾಹ ಪರಿಸ್ಥಿತಿಯನ್ನು ವೀಕ್ಷಿಸಲು ಬಂದಿದ್ದಾರೆ ಈ ವೇಳೆ ಅವರ ಪಕ್ಕದಲ್ಲೇ ರೈಲೊಂದು ವೇಗವಾಗಿ ಸಂಚರಿಸಿದ್ದು ಮುಖ್ಯಮಂತ್ರಿ ಹಾಗೂ ಅವರ ಜೊತೆಗಿದ್ದ ತಂಡ ಕೂದಲೆಳೆಯ ಅಂತರದಲ್ಲಿ ಪಾರಾಗಿದ್ದಾರೆ.

ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಆಂಧ್ರಪ್ರದೇಶದ ಹಲವು ಪ್ರದೇಶಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಅದರಂತೆ ಸಿಎಂ ನಾಯ್ಡು ಅವರು ಅಧಿಕಾರಿಗಳ ಜೊತೆ ಗುರುವಾರ ಪ್ರವಾಹ ಪೀಡಿತ ಪ್ರದೇಶಗಳ ಪರಿಶೀಲನೆ ಮುಂದಾಗಿದ್ದಾರೆ, ಈ ವೇಳೆ ರೈಲು ಸಂಚಾರಕ್ಕಾಗಿ ವಿಶೇಷವಾಗಿ ವಿನ್ಯಾಸಗೊಳಿಸಲಾದ ಬುಡಮೇರು ರೈಲು ಸೇತುವೆಯ ಮೇಲೆ ಪ್ರವಾಹ ಪರಿಸ್ಥಿತಿ ಪರಿಶೀಲಿಸಲು ಸಿಎಂ ಹಾಗೂ ತಂಡ ಸಂಚರಿಸಿದ್ದಾರೆ, ಈ ಸೇತುವೆಯಲ್ಲಿ ಪಾದಚಾರಿಗಳಿಗೆ ಸಂಚರಿಸಲು ಕಡಿಮೆ ಸ್ಥಳ ಇತ್ತು ಎಂದು ಕೂಡ ಹೇಳಲಾಗಿದೆ, ಹಾಗೆ ಪ್ರವಾಹ ಪರಿಸ್ಥಿತಿ ವೀಕ್ಷಣೆ ಮಾಡುವ ವೇಳೆ ರೈಲು ಬಂದಿದೆ ಕೂಡಲೇ ಎಚ್ಚೆತ್ತ ಭದ್ರತಾ ಸಿಬಂದಿ ಮುಖ್ಯಮಂತ್ರಿಗಳನ್ನು ಸೇತುವೆಯ ಬದಿಗೆ ಎಳೆದಿದ್ದಾರೆ ಈ ವೇಳೆ ಸಿಎಂ ನಾಯ್ಡು ಪಕ್ಕದಲ್ಲೇ ರೈಲು ಹಾದು ಹೋಗಿದೆ.

ವಿಶೇಷವೆಂದರೆ ಕಳೆದ 5 ದಿನಗಳಿಂದ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡುತ್ತಿರುವ ನಾಯ್ಡು ಅವರು ಹಲವು ಬಾರಿ ಭದ್ರತಾ ಶಿಷ್ಟಾಚಾರಗಳನ್ನು ಉಲ್ಲಂಘಿಸುತ್ತಿರುವುದು ಬೆಳಕಿಗೆ ಬಂದಿದೆ ಎಂದು ಹೇಳಲಾಗಿದೆ.

ಸಿಎಂ ಪಕ್ಕದಲ್ಲೇ ರೈಲು ಹಾದು ಹೋಗುವ ವಿಡಿಯೋ ಕೂಡ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

Advertisement

 

Advertisement

Udayavani is now on Telegram. Click here to join our channel and stay updated with the latest news.

Next