Advertisement

ಕೆಆರ್‌ಎಸ್‌ ಪ್ರದೇಶದಲ್ಲಿಮೋಡ ಬಿತ್ತನೆ

05:42 PM Aug 05, 2019 | mahesh |

ಬೆಂಗಳೂರು: ಕೆಆರ್‌ಎಸ್‌ ಪ್ರದೇಶ ಹಾಗೂ ಮಲೆನಾಡು ಭಾಗದಲ್ಲಿ ಮಳೆ ಕಡಿಮೆಯಾಗಿರುವುದರಿಂದ ಮೋಡ ಬಿತ್ತನೆ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ.

Advertisement

ಕೆಆರ್‌ಎಸ್‌ನಲ್ಲಿ ನೀರಿಲ್ಲ ಎಂಬ ಮಾಹಿತಿಯನ್ನು ಪತ್ರಿಕೆ ಮತ್ತು ಮಾಧ್ಯಮಗಳ ಮೂಲಕ ತಿಳಿದ ತಕ್ಷಣವೇ ಅಧಿಕಾರಿಗಳಿಗೆ ಮೋಡ ಬಿತ್ತನೆಗೆ ಸೂಚನೆ ನೀಡಿದ್ದೇನೆ ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಸುದ್ದಿಗಾರರಿಗೆ ತಿಳಿಸಿದರು. ಮೋಡ ಬಿತ್ತನೆಗೆ ಹಣಕಾಸಿನ ಕೊರತೆ ಇಲ್ಲ. ಮೋಡ ಬಿತ್ತನೆ ಮಾಡಿರುವ ಕಡೆಗಳಲ್ಲಿ ಒಳ್ಳೆಯ ಫ‌ಲಿತಾಂಶ ಇದೆ. ಹೀಗಾಗಿ ಕೆಆರ್‌ಎಸ್‌ ಹಾಗೂ ಮಲೆನಾಡು ಭಾಗದಲ್ಲೂ ಮೋಡ ಬಿತ್ತನೆಗೆ ಸೂಚನೆ ನೀಡಿದ್ದೇವೆ. ರಾಜ್ಯದಲ್ಲಿ ಒಳ್ಳೆಯ ಮಳೆಯಾಗಿ ರಾಜ್ಯದ ರೈತ ನೆಮ್ಮದಿಯ ಜೀವನ ಮಾಡುವ ದಿನಗಳು ಬಂದೇ ಬರುತ್ತದೆ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next