Advertisement

ಬಾರಾಮುಲ್ಲಾದಲ್ಲಿ ಮೇಘಸ್ಫೋಟಕ್ಕೆ ನಾಲ್ವರ ಸಾವು, ಓರ್ವ ನಾಪತ್ತೆ

08:53 PM Sep 12, 2021 | Team Udayavani |

ಶ್ರೀನಗರ/ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ದಾಂಗಿವಚದಲ್ಲಿ ಮೇಘಸ್ಫೋಟದಿಂದಾಗಿ ನಾಲ್ವರು ಅಸುನೀಗಿದ್ದಾರೆ. ಒಬ್ಬ ನಾಪತ್ತೆಯಾಗಿದ್ದು, ಪೊಲೀಸರು ಮತ್ತು ವಿಪತ್ತು ನಿರ್ವಹಣಾ ದಳದ ಸಿಬ್ಬಂದಿ ಶೋಧ ಕಾರ್ಯ ನಡೆಸುತ್ತಿದ್ದಾರೆ.

Advertisement

ಇದೇ ವೇಳೆ, ರಾಜಸ್ಥಾನದ ವಿವಿಧ ಭಾಗಗಳಲ್ಲಿ ಧಾರಾಕಾರ ಮಳೆಯಾಗಿದೆ. ಇದರಿಂದಾಗಿ ಹಲವೆಡೆ, ಪ್ರವಾಹದ ಸ್ಥಿತಿ ಉಂಟಾಗಿದೆ. ದೆಹಲಿಯಲ್ಲಿ 46 ವರ್ಷಗಳ ದಾಖಲೆ ಮಳೆಯಾದ ಮಾರನೇ ದಿನ ಭಾನುವಾರ ಮೋಡ ಮುಸುಕಿದ ವಾತಾವರಣವಿತ್ತು.

ಹೀಗಾಗಿ, ಮಂದ ಬೆಳಕು ಎಲ್ಲಡೆ ಕಂಡುಬಂತು. ಪಂಜಾಬ್‌ ಮತ್ತು ಹರ್ಯಾಣಗಳಲ್ಲಿ ಧಾರಾಕಾರ ಮಳೆಯಾಗಿದ್ದರಿಂದ ಬಿಸಿಲಿನ ಪ್ರಖರತೆ ಕಡಿಮೆಯಾಗಿತ್ತು. ಗುರುಗ್ರಾಮದಲ್ಲಿ 4.8 ಮಿಲಿ ಮೀಟರ್‌ ಮಳೆಯಾಗಿದೆ.

ಇದನ್ನೂ ಓದಿ :ಗಣಪನ ಕೊರಳಲ್ಲಿ ಹೆಡೆ ಬಿಚ್ಚಿ ಭಕ್ತರಿಗೆ ದರ್ಶನ ನೀಡಿದ ಜೀವಂತ ನಾಗರ ಹಾವು !

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next