Advertisement

ಅಪಘಾತದಲ್ಲಿ ಕ್ಲಬ್‌ ಕ್ಯಾಶಿಯರ್‌ ಸಾವು

12:41 AM Apr 21, 2019 | Team Udayavani |

ಬೆಂಗಳೂರು: ಕೆಲಸ ಮುಗಿಸಿಕೊಂಡು ದ್ವಿಚಕ್ರ ವಾಹನದಲ್ಲಿ ಮನೆಗೆ ಹೋಗುತ್ತಿದ್ದ ಕ್ಲಬ್‌ ಒಂದರ ಕ್ಯಾಶಿಯರ್‌, ನಿಯಂತ್ರಣ ತಪ್ಪಿ ಅಂಗಡಿಯ ಗೋಡೆಗೆ ಡಿಕ್ಕಿ ಹೊಡೆದ ಪರಿಣಾಮ ಮೃತಪಟ್ಟ ಘಟನೆ ಬನಶಂಕರಿ ಸಂಚಾರ ಠಾಣೆ ವ್ಯಾಪ್ತಿಯ ತ್ಯಾಗರಾಜನಗರದಲ್ಲಿ ಶುಕ್ರವಾರ ತಡರಾತ್ರಿ ನಡೆದಿದೆ.

Advertisement

ಶ್ರೀನಗರ ನಿವಾಸಿ ರಾಮಕೃಷ್ಣ (56) ಮೃತ ಕ್ಯಾಶಿಯರ್‌. ಬನಶಂಕರಿಯಲ್ಲಿರುವ ಕ್ಲಬ್‌ನಲ್ಲಿ ಕ್ಯಾಶಿಯರ್‌ ಆಗಿ ಕೆಲಸ ಮಾಡುತ್ತಿದ್ದ ರಾಮಕೃಷ್ಣ ಅವರು, ಶುಕ್ರವಾರ ತಡರಾತ್ರಿ 11 ಗಂಟೆ ಸುಮಾರಿಗೆ ಕೆಲಸ ಮುಗಿಸಿಕೊಂಡು ತಮ್ಮ ದ್ವಿಚಕ್ರ ವಾಹನದಲ್ಲಿ ಮನೆಗೆ ಹೋಗುತ್ತಿದ್ದರು.

ಈ ವೇಳೆ ಶ್ರೀನಗರ ಸಮೀಪದ ತ್ಯಾಗರಾಜನಗರದ ಇಳಿಜಾರು ರಸ್ತೆಯಲ್ಲಿ ಬೈಕ್‌ ಮೇಲೆ ನಿಯಂತ್ರಣ ಕಳೆದುಕೊಂಡು ಅಂಗಡಿಯ ಗೋಡೆಗೆ ಡಿಕ್ಕಿ ಹೊಡೆದಿದ್ದಾರೆ. ಪರಿಣಾಮ ರಾಮಕೃಷ್ಣ ಅವರ ತಲೆಗೆ ಗಂಭೀರ ಗಾಯವಾಗಿದೆ. ಕೂಡಲೇ ಸ್ಥಳೀಯರು ನಿಮ್ಹಾನ್ಸ್‌ಗೆ ಕರೆದೊಯ್ಯುವಾಗ ಮಾರ್ಗ ಮಧ್ಯೆ ಮೃತಪಟ್ಟರು ಎಂದು ಸಂಚಾರ ಪೊಲೀಸರು ಹೇಳಿದರು. ಈ ಸಂಬಂಧ ಬನಶಂಕರಿ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next