Advertisement

Krishna River; ಕೃಷ್ಣೆಯ ಜಲಧಿಗೆ ಸಿಎಂ, ಡಿಸಿಎಂ ಬಾಗಿನ ಅರ್ಪಣೆ

02:45 PM Sep 02, 2023 | Team Udayavani |

ಬಾಗಲಕೋಟೆ : ಆಲಮಟ್ಟ ಜಲಾಶಯದಲ್ಲಿ ಗರಿಷ್ಟ ಮಟ್ಟದಲ್ಲಿ ನೀರು ಸಂಗ್ರಹಣೆಯಾದ ಪ್ರಯುಕ್ತ ಶನಿವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಜಂಟಿಯಾಗಿ ಕೃಷ್ಣೆಯ ಜಲಧಿಗೆ ಗಂಗಾ ಪೂಜೆ ನೆರವೇರಿಸಿ ಬಾಗಿನ ಅರ್ಪಿಸಿದರು.

Advertisement

ಜಲ ಸಂಪನ್ಮೂಲ ಇಲಾಖೆ ಮತ್ತು ಕೃಷ್ಣ ಭಾಗ್ಯ ಜಲನಿಗಮ ನಿಯಮಿತ ವತಿಯಿಂದ ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ಕಂದಾಯ ಸಚಿವ ಕೃಷ್ಣ ಬೈರೇಗೌಡ, ಅಬಕಾರಿ ಹಾಗೂ ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವರಾದ ಆರ್.ಬಿ.ತಿಮ್ಮಾಪೂರ, ಜವಳಿ, ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ, ಬೃಹತ ಮತ್ತು ಮದ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ, ಜಿಲ್ಲಾಧಿಕಾರಿ ಕೆ.ಎಂ ಜಾನಕಿ, ಟಿ.ಭೂಬಾಲನ ಸೇರಿದಂತೆ ಉಬಯ ಜಿಲ್ಲೆಯ ಜನಪ್ರತಿನಿಧಿಗಳು  ಉಪಸ್ಥಿತರಿದ್ದರು.

ಬಾಗಿನ ಅರ್ಪಣೆ‌ ಕಾರ್ಯಕ್ರಮದ ಹಿನ್ನಲೆ ಲಾಲಬಹದ್ದೂರ ಶಾಸ್ತ್ರಿ ಸಾಗರವನ್ನು ತಳಿರು ತೋರಣಗಳಿಂದ ಶೃಂಗರಿಸಲಾಗಿತ್ತು. ಸೂಕ್ತ ಪೊಲೀಸ್ ಬಂದೋಬಸ್ತ್ ಸಹ ಹಾಕಲಾಗಿತ್ತು.

Advertisement

Udayavani is now on Telegram. Click here to join our channel and stay updated with the latest news.

Next