Advertisement

ಕಳೆದ ಎಂಟು ತಿಂಗಳಿಂದ ಆದಾಯ ಕುಸಿತ, ತೆರಿಗೆ ಸಂಗ್ರಹ ಕಡಿಮೆ : ಸಿಎಂ ಯಡಿಯೂರಪ್ಪ

06:09 PM Jun 11, 2021 | Team Udayavani |

ಶಿವಮೊಗ್ಗ:  ಕಳೆದ ಎಂಟು ತಿಂಗಳಿಂದ ಆದಾಯ ಕುಸಿತವಾಗಿದೆ. ತೆರಿಗೆ ಸಂಗ್ರಹ ಕಡಿಮೆ ಆಗಿದೆ ಇದರ ನಡುವೆಯೂ ಅಭಿವೃದ್ಧಿ ಕಾರ್ಯಕ್ಕೆ, ನೀರಾವರಿ ಯೋಜನೆಗೆ ಹಣಕಾಸಿನ ಧಕ್ಕೆ ಆಗದಂತೆ ಶಕ್ತಿ ಮೀರಿ ಪ್ರಯತ್ನಿಸುತ್ತಿದ್ದೇನೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.

Advertisement

ಇಂದು ( ಜೂನ್ 11) ಶಿಕಾರಿಪುರದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು,  ಕೇಂದ್ರ ಸರ್ಕಾರಕ್ಕೆ ಹೆಚ್ಚಿನ ಹಣಕಾಸು ನೆರವಿಗೆ ಮನವಿ ಮಾಡಿದ್ದೇನೆ. ನಾಲ್ಕು ತಿಂಗಳು ಕಳದರೆ ಆರ್ಥಿಕ ಪರಿಸ್ಥಿತಿ ಸುಧಾರಿಸಲಿದೆ. ಈಗಾಗಲೇ ಬಡವರಿಗೆ ತಲುಪುವಂತಹ ಎರಡು ಪ್ಯಾಕೇಜ್ ನೀಡಲಾಗಿದೆ. ಮುಂದೆ ಅನಿವಾರ್ಯ ಆದರೆ ಮತ್ತೊಂದು ಪ್ಯಾಕೇಜ್ ಬಗ್ಗೆ ಚಿಂತನೆ ಮಾಡಲಾಗುವುದು ಎಂದರು.

ಕನಿಷ್ಠ ಶೇ.5ರಷ್ಟು ಪಾಸಿಟಿವಿಟಿ ರೇಟ್ ಬರಬೇಕು ಎಂಬುದು ನಮ್ಮ ಅಪೇಕ್ಷೆ. ಆದರೆ ಶಿವಮೊಗ್ಗ ಸೇರಿದಂತೆ ಶಿಕಾರಿಪುರದಲ್ಲಿ ಕೋವಿಡ್ ಜಾಸ್ತಿ ಪ್ರಮಾಣದಲ್ಲಿದೆ.  ಅದನ್ನು ತಡೆಯಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಲಾಕ್ ಡೌನ್ ಇನ್ನೂ ಒಂದು ವಾರ ವಿಸ್ತರಿಸಿರುವುದರಿಂದ ಕೋವಿಡ್ ಹತೋಟಿಗೆ ಬರುತ್ತದೆ ಎಂಬ ವಿಶ್ವಾಸ ಇದೆ.  ಇದಕ್ಕೆ ಜನ ಸಹಕಾರ ಕೊಡಬೇಕು. ಇನ್ನೊಂದು ವಾರದಲ್ಲಿ ಪಾಸಿಟಿವಿಟಿ ರೇಟ್ ಶೇ.5ಕ್ಕೆ ಬರುತ್ತದೆ ಎಂಬ ವಿಶ್ವಾಸ ಇದೆ ಎಂದರು.

ಅಂತಾರಾಷ್ಟ್ರೀಯ ಮಟ್ಟದಲ್ಲಿ ಪೆಟ್ರೋಲಿಯಂ ದರ ಜಾಸ್ತಿಯಾಗಿದ್ದು, ಕಾಂಗ್ರೆಸ್ ನವರ ಪ್ರತಿಭಟನೆ ಬಗ್ಗೆ ಪ್ರತಿಕ್ರಿಯಿಸಲಾರೆ. ಎಲ್ಲಾ ಪಕ್ಷಗಳು ಈ ಸಂದರ್ಭದಲ್ಲಿ ಸಹಕಾರ ನೀಡಬೇಕು. ಪ್ರಧಾನಿ ನರೇಂದ್ರ ಮೋದಿ ಮುಂದಾಲೋಚನೆನಿಂದ ಕೆಲಸ ಮಾಡುತ್ತಿದ್ದಾರೆ.  ಈ ಸಂದರ್ಭದಲ್ಲಿ ಕಾಂಗ್ರೆಸ್ ನವರು ರಾಜಕಾರಣ ಮಾಡದೆ ಸಹಕಾರ ಕೊಡಬೇಕು ಎಂದರು.

ನಾಳೆ, ನಾಡಿದ್ದರಲ್ಲಿ ರಾಜ್ಯಕ್ಕೆ ದೊಡ್ಡ ಪ್ರಮಾಣದಲ್ಲಿ ವ್ಯಾಕ್ಸಿನ್ ಬರಲಿದೆ. ಎಲ್ಲಾ ಜಿಲ್ಲೆಗೂ ಜನಸಂಖ್ಯೆಗೆ ಅನುಗುಣವಾಗಿ ವ್ಯಾಕ್ಸಿನ್ ಸಿಗಲಿದೆ.  ಜೂನ್ 17, 18ರ ನಂತರ ಕರ್ನಾಟಕದ ಉಸ್ತುವಾರಿ ಅರುಣ್ ಸಿಂಗ್ ಸಹಜವಾಗಿಯೇ ರಾಜ್ಯಕ್ಕೆ ಬರಲಿದ್ದಾರೆ.  ಎರಡು ದಿನ ಕರ್ನಾಟಕದಲ್ಲೇ ಇದ್ದು ಒಂದೆರಡು ಜಿಲ್ಲೆಗೆ ಭೇಟಿ ನೀಡಲಿದ್ದಾರೆ. ಅರುಣ್ ಸಿಂಗ್ ಭೇಟಿಗೆ ವಿಶೇಷ ಅರ್ಥ ಕಲ್ಪಿಸಬೇಕಿಲ್ಲ ಎಂದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next