Advertisement

ಕೋವಿಡ್ ನಿಂದ ಚೇತರಿಸಿದ ಸಿಎಂ ಯಡಿಯೂರಪ್ಪ ಆಸ್ಪತ್ರೆಯಿಂದ ಡಿಸ್ಚಾರ್ಜ್

05:09 PM Aug 10, 2020 | keerthan |

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು  ಕೋವಿಡ್ 19 ನಿಂದ ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ  ಬಿಡುಗಡೆಯಾದರು.

Advertisement

ಕೋವಿಡ್ 19 ಸೋಂಕು ಕಾಣಿಸಿಕೊಂಡಿರುವ ಕಾರಣ ಬಿ ಎಸ್ ಯಡಿಯೂರಪ್ಪ ಅವರು ಆಗಸ್ಟ್ ಎರಡರಂದು ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದರು.

ಸದ್ಯ ಮುಖ್ಯಮಂತ್ರಿಗಳು ಸಂಪೂರ್ಣ ಗುಣಮುಖರಾಗಿದ್ದು, ಕೋವಿಡ್ ಪರೀಕ್ಷೆಯಲ್ಲಿ ನೆಗೆಟಿವ್ ಬಂದ ಕಾರಣ ಬಿಡುಗಡೆ ಮಾಡಲಾಗಿದೆ. ಪೊಲೀಸ್ ಬಿಗುಭದ್ರತೆಯಲ್ಲಿ ಆಸ್ಪತ್ರೆಯಿಂದ ಮನೆಗೆ ಕರೆದೊಯ್ಯಲಾಯಿತು.

ಸೋಂಕಿನ ಯಾವುದೇ ಲಕ್ಷಣವಿಲ್ಲದ ಹಿನ್ನೆಲೆ ಮುಖ್ಯಮಂತ್ರಿಗಳು ಆಸ್ಪತ್ರೆಯ ಕೊಠಡಿಯಲ್ಲಿ ಅಗತ್ಯ ಮುಂಜಾಗ್ರತಾ ಕ್ರಮಗಳೊಂದಿಗೆ ಕಚೇರಿಯ ದೈನಂದಿನ ಕೆಲಸ ಕಾರ್ಯಗಳನ್ನು ನಿರ್ವಹಿಸುತ್ತಿದ್ದರು.

ಆಸ್ಪತ್ರೆಯಲ್ಲಿ ಪರಿಣಿತ ವೈದ್ಯರ ತಂಡವು ನಿಗಾವಹಿಸಿತ್ತು. ನಿಯಮಗಳಂತೆ ಸೋಂಕು ನಿವಾರಕ ಔಷಧ ಪದ್ಧತಿಯನ್ನು ಮತ್ರ ಅನುಸರಿಸಲಾಗುತ್ತಿತ್ತು.  ಏಳು ದಿನಗಳ ನಿರಂತರ ಆರೈಕೆಯಿಂದ ಸೋಂಕು ವಾಸಿಯಾಗಿ ಸೋಮವಾರ ಆಸ್ಪತ್ರೆಯಿಂದ ಮುಖ್ಯಮಂತ್ರಿಗಳು ಬಿಡುಗಡೆಯಾಗಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

Advertisement

Advertisement

Udayavani is now on Telegram. Click here to join our channel and stay updated with the latest news.

Next