Advertisement

ಸುಳ್ಯ: ಸಿಎಂಗೆ ವಿವಿಧ ಬೇಡಿಕೆ ಸಲ್ಲಿಕೆ

01:21 AM Jul 13, 2022 | Team Udayavani |

ಸುಳ್ಯ : ಮಳೆಹಾನಿ ವೀಕ್ಷಣೆಗಾಗಿ ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ ಕೈಗೊಂಡಿರುವ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಸುಳ್ಯ ತಾಲೂಕಿನ ಗಡಿಯಲ್ಲಿ ಸ್ವಾಗತಿಸಲಾಯಿತು. ಬಳಿಕ ಬೊಮ್ಮಾಯಿ ಸುಳ್ಯದ ನಿರೀಕ್ಷಣ ಮಂದಿರಕ್ಕೆ ಭೇಟಿ ನೀಡಿದರು.

Advertisement

ಈ ವೇಳೆ ಮುಖ್ಯಮಂತ್ರಿಗಳು ಅಧಿಕಾರಿಗಳು, ಸಚಿವರು, ಶಾಸಕರ ಜತೆ ಜಿಲ್ಲೆಯ ಹಾಗೂ ತಾಲೂಕಿನಲ್ಲಿ ಮಳೆಹಾನಿಯಿಂದ ಉಂಟಾದ ಹಾನಿಗಳ ಬಗ್ಗೆ ಮಾಹಿತಿ ಪಡೆದರು. ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಸುಳ್ಯ ಶಾಸಕ ಎಸ್‌.ಅಂಗಾರ ಅವರು ಭೂಕಂಪನ ಹಾಗೂ ಮಳೆಹಾನಿ ಬಗ್ಗೆ ವಿವರಿಸಿದರು. ಈ ವೇಳೆ ವಿವಿಧ ಬೇಡಿಕೆಗಳನ್ನು ಸಲ್ಲಿಸಲಾಯಿತು.

ಜಿಲ್ಲಾ ಉಸ್ತುವಾರಿ ಸಚಿವ ವಿ.ಸುನಿಲ್‌ ಕುಮಾರ್‌, ಕಂದಾಯ ಸಚಿವ ಆರ್‌.ಅಶೋಕ್‌, ಲೋಕೊಪ ಯೋಗಿ ಸಚಿವ ಸಿ.ಸಿ.ಪಾಟೀಲ್‌, ಸಂಸದ ನಳಿನ್‌ ಕುಮಾರ್‌ ಕಟೀಲ್‌, ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ, ಜಿ.ಪಂ. ಸಿಇಒ ಡಾ.ಕುಮಾರ್‌, ಎಸ್‌ಪಿ ಋಷಿಕೇಶಿ ಭಗವಾನ್‌ ಸೋನಾವಣೆ, ಪುತ್ತೂರು ಸಹಾಯಕ ಆಯುಕ್ತ ಗಿರೀಶ್‌ ನಂದನ್‌, ಸುಳ್ಯ ತಹಶೀಲ್ದಾರ್‌ ಅನಿತಾಲಕ್ಷ್ಮೀ, ತಾ.ಪಂ. ಇಒ ಭವಾನಿಶಂಕರ್‌, ಸುಳ್ಯ ನ.ಪಂ ಅಧ್ಯಕ್ಷ ವಿನಯಕುಮಾರ್‌ ಕಂದಡ್ಕ, ಪ್ರಮೋದ್‌ ಮಧ್ವರಾಜ್‌ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ನಿರೀಕ್ಷೆಯಲ್ಲಿದ್ದ ಜನತೆ
ಮುಖ್ಯಮಂತ್ರಿಗಳು ಸುಳ್ಯಕ್ಕೆ ಭೇಟಿ ನೀಡುತ್ತಿರುವ ಹಿನ್ನಲೆಯಲ್ಲಿ ಭಾರೀ ಸಂಖ್ಯೆಯಲ್ಲಿ ಜನರು ನಿರೀಕ್ಷಣ ಮಂದಿರದ ಬಳಿ ಸೇರಿದ್ದರು. ತಮ್ಮ ಮನವಿ, ಬೇಡಿಕೆ ಪತ್ರಗಳನ್ನು ನೀಡಲು ಸಿದ್ಧರಾಗಿದ್ದರು. ಆದರೆ ಸಿಎಂ 4.30ರ ವೇಳೆಗೆ ಐಬಿಗೆ ಆಗಮಿಸಿ ಕೇವಲ 15 ನಿಮಿಷದಲ್ಲಿ ಸುಳ್ಯದಿಂದ ತೆರಳಿದರು. ಜನರ ಸಮಸ್ಯೆ ಆಲಿಸುವ ಹಾಗೂ ಪರಿಹಾರ ಘೋಷಿಸುವ ನಿರೀಕ್ಷೆಯಲ್ಲಿದ್ದ ಜನರು ಅವಕಾಶ ಸಿಗದ ಬಗ್ಗೆ ಬೇಸರಗೊಂಡು ನಿರ್ಗಮಿಸಿದರು. ಭೇಟಿ ವೇಳೆ ಪೇಟೆಯಲ್ಲಿ ಝೀರೋ ಟ್ರಾಫಿಕ್‌ ಏರ್ಪಡಿಸಲಾಗಿತ್ತು.

Advertisement

Udayavani is now on Telegram. Click here to join our channel and stay updated with the latest news.

Next