Advertisement

ಹಾನಗಲ್ ಮತ್ತು ಸಿಂದಗಿ ಕ್ಷೇತ್ರಕ್ಕೆ ನಡೆಯುವ ಉಪ ಚುನಾವಣೆಯಲ್ಲಿ ಗೆಲುವು ನಿಶ್ಚಿತ :ಬೊಮ್ಮಾಯಿ

12:26 PM Oct 12, 2021 | Team Udayavani |

ದಾವಣಗೆರೆ : ಹಾನಗಲ್ ಮತ್ತು ಸಿಂದಗಿ ವಿಧಾನ ಸಭಾ ಕ್ಷೇತ್ರದ ಎರಡು ಉಪ ಚುನಾವಣೆಯಲ್ಲಿ ಗೆದ್ದೆ ಗೆಲ್ಲುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಪೂರ್ಣ ವಿಶ್ವಾಸ ವ್ಯಕ್ತಪಡಿಸಿದರು.

Advertisement

ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಾನಗಲ್ ಕ್ಷೇತ್ರದಲ್ಲಿ ನಾಮ ಪತ್ರ ಸಲ್ಲಿಸಿರುವ ಪಂಚಮಸಾಲಿ ಸಮಾಜದ ಮುಖಂಡ ಸಿ.ಆರ್. ಬಳ್ಳಾರಿ ಯವರದ್ದು ನಮ್ಮದು 40 ವರ್ಷಗಳ ಹಳೆಯ ಸಂಬಂಧ. ಅವರು ಲೋಕೋಪಯೋಗಿ ಇಲಾಖೆಯಲ್ಲಿ ಇಂಜಿನಿಯರ್ ಆಗಿದ್ದಾಗನಿಂದಲೂ ಸಂಬಂಧ ಇದೆ. ನಾಮಪತ್ರ ಹಿಂಪಡೆಯುವಂತೆ ಮಾತುಕತೆ ನಡೆಸಲಾಗಿದೆ. ಅವರು ಸಹ ಪೂರಕವಾಗಿ ಯೇ ಸ್ಪಂದಿಸಿದ್ದಾರೆ. ನಾಮಪತ್ರ ಹಿಂದಕ್ಕೆ ಪಡೆದೇ ಪಡೆಯುತ್ತಾರೆ ಎಂಬುದನ್ನ ನಾನು ಹೇಳಲಿಕ್ಕೆ ಬರುವುದಿಲ್ಲ ಎಂದು ತಿಳಿಸಿದರು.

ದಾವಣಗೆರೆಗೆ ಎರಡು ಮುಖ್ಯ ಉದ್ದೇಶದಿಂದ ಭೇಟಿ ನೀಡಿದ್ದೇನೆ. ಇದೇನು ಅನಿರೀಕ್ಷಿತ ಭೇಟಿ ಏನಲ್ಲ. ಸೋಮವಾರ ರಾತ್ರಿ ದಾವಣಗೆರೆ ಜಿಲ್ಲೆಯ ಎಲ್ಲ ಶಾಸಕರನ್ನು ಕರೆದು ಅಭಿವೃದ್ಧಿ ಕೆಲಸ ಕಾರ್ಯ ಗಳ ಬಗ್ಗೆ ಚರ್ಚೆ ಮಾಡಲಾಗಿದೆ. ಮಂಗಳವಾರ ಬೆಳಗ್ಗೆ ಹಾವೇರಿ, ಹಾನಗಲ್ ಭಾಗದ ಪ್ರಮುಖರು, ಮುಖಂಡರು ಜೊತೆ ಉಪ ಚುನಾವಣೆ ಗೆಲ್ಲುವ ತಂತ್ರಗಳ ಬಗ್ಗೆ ಚರ್ಚೆ ನಡೆಸಲಾಗಿದೆ. ಹಾನಗಲ್ ಮತ್ತು ಸಿಂದಗಿ ಎರಡೂ ಕ್ಷೇತ್ರದಲ್ಲಿ ಗೆಲ್ಲುತ್ತೇವೆ ಎಂದು ಪುನರುಚ್ಚರಿಸಿದರು.

ಇದನ್ನೂ ಓದಿ :ಬೆಳ್ತಂಗಡಿ: ಬಂದಾರು ಗ್ರಾಮದ ಬಟ್ಲಡ್ಕ ಎಂಬಲ್ಲಿ ಅಕ್ರಮ ಮರಳು ಅಡ್ಡೆಗೆ ದಾಳಿ

ಬೆಂಗಳೂರು ಉಸ್ತುವಾರಿ ಕುರಿತಾಗಿ ಕೇಳಲಾದ ಪ್ರಶ್ನೆಗೆ ಕಾದು ನೋಡಿ ಎಂದಷ್ಟೇ ಪ್ರತಿಕ್ರಿಯಿಸಿದರು.

Advertisement

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next