Advertisement

ಕಾಂಗ್ರೆಸ್‌ನವರ ಕಪಾಟುಗಳಲ್ಲಿ ಭ್ರಷ್ಟಾಚಾರದ ಅಸ್ಥಿಪಂಜರ: ಸಿಎಂ

11:19 PM Apr 16, 2022 | Team Udayavani |

ಬೆಂಗಳೂರು: ಭ್ರಷ್ಟಾಚಾರದ ವಿರುದ್ಧ ಯಾತ್ರೆ ಹೊರಟಿರುವ ಕಾಂಗ್ರೆಸ್ಸಿಗರ ಬೀರುಗಳಲ್ಲಿ ಭ್ರಷ್ಟಾಚಾರದ ಅಸ್ಥಿಪಂಜರಗಳು ಎಷ್ಟಿವೆ ಎಂದು ಮೊದಲು ಲೆಕ್ಕಹಾಕಿಕೊಳ್ಳಲಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ.

Advertisement

ತಮ್ಮ ನಿವಾಸದ ಬಳಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಕಾಂಗ್ರೆಸ್‌ನವರು ಬಹಳ ಶುದ್ಧಹಸ್ತರಂತೆ ಸೋಗು ಹಾಕಿ ಭ್ರಷ್ಟಾಚಾರದ ಬಗ್ಗೆ ಮಾತನಾಡುತ್ತಾರೆ, ಯಾತ್ರೆ ಹೊರಟಿದ್ದಾರೆ. ಇದ್ಯಾವುದರಿಂದಲೂ ಪ್ರಯೋಜನವಾಗುವುದಿಲ್ಲ ಎಂದು ಗೊತ್ತಿದೆ. ಕರ್ನಾಟಕದ ಜನತೆ ಕಾಂಗ್ರೆಸ್‌ ಅನ್ನು ಬಹಳ ವರ್ಷಗಳಿಂದ ನೋಡಿದ್ದಾರೆ. ಯಾರ್ಯಾರ ಕಾಲದಲ್ಲಿ ಯಾವ ಯಾವ ಹಗರಣಗಳಾಗಿವೆ ಎಂಬುದನ್ನು ನಾವೂ ಜನರ ಮುಂದೆ ಇಡಬೇಕಾದ ಕಾಲ ಬರುತ್ತಿದೆ ಎಂದರು.

ಸಂತೋಷ್‌ ಪಾಟೀಲ್‌ ಆತ್ಮಹತ್ಯೆ ಪ್ರಕರಣದಲ್ಲಿ ಕೆ.ಎಸ್‌. ಈಶ್ವರಪ್ಪ ಅವರ ಮೇಲೆ ಭ್ರಷ್ಟಾಚಾರ ನಿಗ್ರಹ ಕಾಯ್ದೆಯ ನಿಯಮವನ್ನು ಯಾಕೆ ಹಾಕಲಾಗಿಲ್ಲ ಎಂಬ ಪ್ರಶ್ನೆಗೆ, ಸಂತೋಷ್‌ ಎನ್ನುವ ವ್ಯಕ್ತಿ ಆತ್ಮಹತ್ಯೆಗೆ ಪ್ರಚೋದನೆ ನೀಡಿರುವ ಆರೋಪ ಇದ್ದು, ಈ ಬಗ್ಗೆ ತನಿಖೆಯಾಗುತ್ತಿದೆ. ಶವಪರೀಕ್ಷೆ ಬಳಿಕ ಬರುವ ಎಫ್‌.ಎಸ್‌.ಎಲ್‌. ವರದಿಯಲ್ಲಿ ಸಾವಿನ ವೈಜ್ಞಾನಿಕ ಕಾರಣ ಗೊತ್ತಾಗಲಿದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next