Advertisement

ವಿಕಲಚೇತನ ಯುವಕನ ಬೇಡಿಕೆಗೆ ಸ್ಪಂದನೆ; ಮಾನವೀಯತೆ ಮೆರೆದ ಸಿಎಂ

08:28 PM May 14, 2022 | Team Udayavani |

ಬೆಂಗಳೂರು: ಕೊಪ್ಪಳ ಜಿಲ್ಲೆಯ ಕನಕಗಿರಿ ಕ್ಷೇತ್ರದ ಅಡವಿಬಾವಿ ಗ್ರಾಮದ ವಿಕಲಚೇತನ ಯುವಕ ಶಿವಪ್ಪ ಅವರ ಬೇಡಿಕೆಗೆ ಶನಿವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಂದಿಸಿ ಮಾನವೀಯತೆ ಮೆರೆದಿದ್ದಾರೆ.

Advertisement

ಬೆಂಗಳೂರಿನ ಬಿಜೆಪಿ ಕೋರ್‌ ಕಮಿಟಿ ಸಭೆಯ ಅನಂತರ ಹೊರಗೆ ಬಂದಿದ್ದ ಸಿಎಂ ಅವರನ್ನು ಭೇಟಿ ಮಾಡಿದ ಶಿವಪ್ಪ ತನ್ನ ತ್ರಿಚಕ್ರ ವಾಹನ ಅಪಘಾತಕ್ಕೆ ಒಳಗಾಗಿದ್ದು, ಹೊಸ ವಾಹನಕ್ಕೆ ಮನವಿ ಮಾಡಿದರು.

ಇದನ್ನೂ ಓದಿ:ನಿಗದಿಪಡಿಸಿದ ಅವಧಿಯೊಳಗೆ ಬೆಳೆ ಸಮೀಕ್ಷೆ ಪೂರ್ಣಗೊಳಿಸಿ: ಬಿ.ಸಿ. ಪಾಟೀಲ್‌

ಈ ವೇಳೆ ತತ್‌ಕ್ಷಣವೇ ಸ್ಪಂದಿಸಿದ ಸಿಎಂ ಬೊಮ್ಮಾಯಿ ಕೊಪ್ಪಳ ಜಿಲ್ಲಾಧಿಕಾರಿಗಳಿಗೆ ದೂರವಾಣಿ ಕರೆ ಮೂಲಕ ಮಾತಾಡಿ ಶಿವಪ್ಪನಿಗೆ ತ್ರಿಚಕ್ರ ವಾಹನದ ವ್ಯವಸ್ಥೆ ಮಾಡಿಕೊಡುವಂತೆ ಸೂಚನೆ ನೀಡಿದರು.

 

Advertisement
Advertisement

Udayavani is now on Telegram. Click here to join our channel and stay updated with the latest news.

Next