Advertisement

ನೂತನ ಪರಿಷತ್ ಸದಸ್ಯರ ಪ್ರಮಾಣ ವಚನ

01:16 AM Jul 07, 2022 | Team Udayavani |

ಬೆಂಗಳೂರು: ರಾಜ್ಯ ವಿಧಾನಪರಿಷತ್‌ಗೆ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದಿಂದ ಆಯ್ಕೆಯಾಗಿದ್ದ ನಾಲ್ವರು ಬುಧವಾರ ಪ್ರಮಾಣ ವಚನ ಸ್ವೀಕರಿಸಿದರು.

Advertisement

ವಿಧಾನಸೌಧ ಸಮ್ಮೆಳನ ಸಭಾಂಗಣದಲ್ಲಿ ನೂತನ ಸದಸ್ಯರಾದ ಬಸವರಾಜ ಹೊರಟ್ಟಿ, ಪ್ರಕಾಶ್‌ ಹುಕ್ಕೇರಿ, ಮಧು ಜಿ. ಮಾದೇಗೌಡ, ಹಣುಮಂತ ನಿರಾಣಿ ಅವರಿಗೆ ಸಭಾಪತಿ ರಘುನಾಥ್‌ರಾವ್‌ ಮಲ್ಕಾಪುರೆ ಪ್ರಮಾಣ ಬೋಧಿಸಿದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಪರಿಷತ್‌ ಸಭಾ ನಾಯಕ ಕೋಟ ಶ್ರೀನಿವಾಸ ಪೂಜಾರಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌, ಪರಿಷತ್‌ ವಿಪಕ್ಷ ನಾಯಕ ಬಿ.ಕೆ. ಹರಿಪ್ರಸಾದ್‌, ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್‌ ಉಪಸ್ಥಿತರಿದ್ದರು.

ನನಗೆ ಸಚಿವ ಸ್ಥಾನದ ಉಸಾಬರಿಯೇ ಬೇಡ. ಈಗ ಇರುವವರನ್ನು ಸುಧಾರಿಸಲಿ. ಸಭಾಪತಿ ಸ್ಥಾನ ನೀಡಿದರೆ ಸಾಕು. ಅದನ್ನು ಸಮರ್ಥವಾಗಿ ನಿಭಾಯಿಸುತ್ತೇನೆ. ಮಂತ್ರಿಯಾಗುವ ಇಚ್ಛೆ ಇಲ್ಲ.
– ಬಸವರಾಜ ಹೊರಟ್ಟಿ

Advertisement

Udayavani is now on Telegram. Click here to join our channel and stay updated with the latest news.

Next