Advertisement

ಮತಾಂತರ ತಡೆ ಕಾನೂನು ತರುವ ಪ್ರಯತ್ನ ನಮ್ಮ ಸರ್ಕಾರ ಮಾಡುತ್ತಿದೆ: ಸಿಎಂ ಬಸವರಾಜ ಬೊಮ್ಮಾಯಿ

01:25 PM Dec 12, 2021 | Team Udayavani |

ಹುಬ್ಬಳ್ಳಿ: ಆಸೆ ಆಮೀಷವೊಡ್ಡಿ ಮತಾಂತರ ಮಾಡೋದಕ್ಕೆಅವಕಾಶವಿಲ್ಲ. ಯಾವ ಧರ್ಮಕ್ಕೂ ಆತಂಕವಾಗಬಾರದು‌. ಮತಾಂತರ ಅನ್ನೋದು ಸಮಾಜಕ್ಕೆ ಒಳ್ಳೆಯದಲ್ಲ. ಕಾನೂನು ತರುವ ಪ್ರಯತ್ನ ನಮ್ಮ ಸರ್ಕಾರ ಮಾಡುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದೂ, ಇಸ್ಲಾಂ, ಕ್ರಿಶ್ಚಿಯನ್, ಸಿಖ್ ಸೇರಿದಂತೆ ಎಲ್ಲಾ ಧರ್ಮಗಳು ಸಂವಿಧಾನಾತ್ಮಕವಾಗಿ ರಚನೆಯಾಗಿವೆ. ಅವರಿಗೆ ಯಾವುದೇ ಆತಂಕ ಬೇಡ. ಈಗಾಗಲೇ ಕ್ರಿಶ್ಚಿಯನ್ ಸಮುದಾಯ ನಾಯಕರಿಗೆ ನಾನು ಹೇಳಿದ್ದೇನೆ. ಅವರಿಗೆ ಯಾವುದೇ ತೊಂದರೆಯಾಗಲ್ಲ. ಬದಲಾಗಿ ಬಡತನ ದುರುಪಯೊಗ ಮಾಡಿಕೊಂಡು ಮತಾಂತರ ಮಾಡೋದು ತಪ್ಪು. ಮತಾಂತರ ಕಾಯ್ದೆ ಚರ್ಚೆಗೂ ಮೊದಲು ಒಂದು ಕಮಟಿ ಮಾಡಿದ್ದೇವೆ.

ಕಾನೂನು ಇಲಾಖೆಯ ಕಮಿಟಿ ಪರಿಶೀಲನೆ ಮಾಡುತ್ತಿದೆ. ಆ ವರದಿ ಸಂಪುಟಕ್ಕೆ  ಬರುತ್ತದೆ. ಬೆಳಗಾವಿಯಲ್ಲಿ ಸಂಪುಟ ಸಭೆ ನಡೆಸುತ್ತೇವೆ‌. ಅಲ್ಲಿಂದ ಅಧಿವೇಶನಕ್ಕೆ ಮಸೂದೆ ಬಂದರೆ ಅಲ್ಲಿಯೇ ಚರ್ಚೆ ಮಾಡುತ್ತೇವೆ ಎಂದರು.

ಸೋಮವಾರದಿಂದ ಬೆಳಗಾವಿ ಅಧಿವೇಶ ಆರಂಭವಾಗುತ್ತೆ. ಈಗಾಗಲೇ ಎಲ್ಲಾ ತಯಾರಿ ಮಾಡಿದ್ದೇವೆ. ಈ ಭಾಗದ ಅಭಿವೃದ್ಧಿ ಬಗ್ಗೆ ಚರ್ಚೆ ಮಾಡುತ್ತೇವೆ. ಒಮೆಕ್ರಾನ್ ಟೆಸ್ಟಿಂಗ್ ಲ್ಯಾಬ್ ಗಳನ್ನು ಹೆಚ್ಚಿಗೆ ಮಾಡುತ್ತೇವೆ. ಈಗಾಗಲೆ ಒಂದು ಜಿನೊಮಿಕ್ ಸ್ವಿಕ್ವೇನ್ಸ್ ಲ್ಯಾಬ್ ಇದೆ. ಅದನ್ನು ಹೆಚ್ಚಿಗೆ ಮಾಡುತ್ತೇವೆ ಎಂದರು.

ಈಗಾಗಲೇ ಪ್ರಧಾನಿಗಳು ತಮ್ಮ ಟ್ವಿಟರ್ ಹ್ಯಾಕ್ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಅದರ ವಿರುದ್ಧ ಕಾರ್ಯಾಚರಣೆ ಕೂಡಾ ಮಾಡಿದ್ದಾರೆ. ಈ ರೀತಿ ಅಲ್ಲಲ್ಲಿ ಘಟನೆಗಳು ಆಗುತ್ತಿವೆ. ತಾಂತ್ರಿಕ ಬಲದಿಂದ ಅವುಗಳನ್ನು ರಕ್ಷಣೆ ಮಾಡುವ ಕೆಲಸ ಮಾಡುತ್ತೇವೆ ಎಂದು ಹೇಳಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next