Advertisement

ಮಹತ್ವದ ಬೆಳವಣಿಗೆ : ಬಿಎಸ್ ವೈ ಭೇಟಿ ಮಾಡಿದ ಸಿಎಂ, ಡಿಸಿಎಂ ಹುದ್ದೆ ಸೃಷ್ಟಿ ಸಾಧ್ಯತೆ?

11:17 PM May 02, 2022 | Team Udayavani |

ಬೆಂಗಳೂರು: ಮಹತ್ವದ ಬೆಳವಣಿಗೆಯಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಮಾಜಿ‌ ಸಿಎಂ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ.
ಸಿಎಂ ಬೊಮ್ಮಾಯಿ ಸೋಮವಾರ ತಡ ರಾತ್ರಿ ಕಾವೇರಿ ನಿವಾಸದಲ್ಲಿ ಬಿಎಸ್ ವೈ ರನ್ನು ಭೇಟಿ ಮಾಡಿ ಸುಮಾರು 15 ನಿಮಿಷಗಳ ಕಾಲ ಚರ್ಚೆ ಮಾಡಿದ್ದಾರೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ ಮಂಗಳವಾರ ರಾಜ್ಯಕ್ಕೆ ಆಗಮಿಸುತ್ತಿರುವುದರಿಂದ ಈ ಭೇಟಿ ಮಹತ್ವ ಪಡೆದುಕೊಂಡಿದೆ.

Advertisement

ಡಿಸಿಎಂ ಹುದ್ದೆ ಸೃಷ್ಟಿ ಸಾಧ್ಯತೆ?
ರಾಜ್ಯ ಸರ್ಕಾರದಲ್ಲಿ ಬದಲಾವಣೆ ಮಾಡಲು ಮುಂದಾಗಿರುವ ಬಿಜೆಪಿ ಹೈ ಕಮಾಂಡ್ ಮತ್ತೆ ಡಿಸಿಎಂ ಹುದ್ದೆ ಸೃಷ್ಟಿಸುವ ಆಲೋಚನೆ ಮಾಡಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಮಂಗಳವಾರ ಅಮಿತ್ ಶಾ ರಾಜ್ಯ ನಾಯಕರುಗಳ ಜೊತೆ ನಡೆಸುವ ಸಭೆಯಲ್ಲಿ ಈ ಬಗ್ಗೆಯೂ ಚರ್ಚೆಯಾಗುವ ಸಾಧ್ಯತೆ ಇದ್ದು, ಮೂರು ಅಥವಾ ನಾಲ್ಕು ಡಿಸಿಎಂ ಹುದ್ದೆಗಳನ್ನು ಸೃಷ್ಟಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ : ಉಪ್ಪುಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ : ಕಾರವಾರ ಜಿ.ಪಂ. ಮಾಜಿ ಸದಸ್ಯ ಗಂಭೀರ

Advertisement

Udayavani is now on Telegram. Click here to join our channel and stay updated with the latest news.

Next