Advertisement

ಮಾಜಿ ಸಿಎಂ ಯಡಿಯೂರಪ್ಪರನ್ನು ಭೇಟಿಯಾದ ಸಿಎಂ ಬಸವರಾಜ ಬೊಮ್ಮಾಯಿ

12:54 PM Aug 14, 2021 | Team Udayavani |

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಬೆಂಗಳೂರಿನಲ್ಲಿ ಮಾಜಿ‌ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ‌ ಮಾತುಕತೆ ನಡೆಸಿದರು.

Advertisement

ಆನಂದ್ ಸಿಂಗ್, ಸಿ.ಪಿ.ಯೋಗೇಶ್ವರ್ ಮುಂತಾದವರ ಅತೃಪ್ತಿಯ ಹೇಳಿಕೆಗಳ ನಡುವೆ ಈ ಸಿಎಂ-ಮಾಜಿ ಸಿಎಂ ಭೇಟಿ ಮಹತ್ವ ಪಡೆದಿದೆ.

ಇದನ್ನೂ ಓದಿ:ಸಾರಿಗೆ ನಿಗಮದ ನಿದ್ದೆಗೆಡಿಸಿದ ಗಾಂಜಾ ಸಾಗಣೆ! ಸದ್ಯದ ವ್ಯವಸ್ಥೆಯಲ್ಲಿ ಜಾಡಯ ಪತ್ತೆ ಅಸಾಧ್ಯ!

ಬಯಸಿದ ಖಾತೆ ನೀಡಿಲ್ಲ  ಎನ್ನುವ ಕಾರಣಕ್ಕೆ ಮುನಿಸಿಕೊಂಡಿದ್ದ ಸಚಿವ ಆನಂದ್‌ ಸಿಂಗ್‌ ಅವರನ್ನು ಮಾಜಿ ಸಿಎಂ ಯಡಿಯೂರಪ್ಪ ಮುಂದಾಳತ್ವದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಮನವೊಲಿಸಿದ್ದರು. ಸ್ವಾತಂತ್ರ ದಿನಾಚರಣೆಯ ನಂತರ ದೆಹಲಿಗೆ ತೆರಳಿ ವರಿಷ್ಠರ ಜೊತೆ ಮಾತನಾಡುವಂತೆ ಆನಂದ್ ಸಿಂಗ್ ಗೆ ಸೂಚಿಸಲಾಗಿತ್ತು. ಈ ಘಟನೆಗಳ ಹಿನ್ನೆಲೆಯಲ್ಲಿ ಇಂದಿನ ಈ ಯಡಿಯೂರಪ್ಪ- ಬೊಮ್ಮಾಯಿ ಭೇಟಿ ಮಹತ್ವ ಪಡೆದಿದೆ.

Advertisement

Udayavani is now on Telegram. Click here to join our channel and stay updated with the latest news.

Next