Advertisement

ನನ್ನ ನಾಯಕತ್ವ ಅಲ್ಲ, ಪಕ್ಷದ ನಾಯಕತ್ವದಲ್ಲೇ ಚುನಾವಣೆ: ಸಿಎಂ ಬೊಮ್ಮಾಯಿ

11:52 AM Sep 28, 2021 | Team Udayavani |

ಬೆಂಗಳೂರು: ಚುನಾವಣಾ ಆಯೋಗ ಇಂದು ಎರಡು ಬೈ ಎಲೆಕ್ಸನ್ ಅನೌನ್ಸ್ ಮಾಡಿದೆ. ನನ್ನ ನಾಯಕತ್ವ ಅಲ್ಲ, ಪಕ್ಷದ ನಾಯಕತ್ವದಲ್ಲೇ ಚುನಾವಣೆ ಎದುರಿಸುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಉದಾಸಿ ನಿಧನದಿಂದ ತೆರವಾಗಿರುವ ಹಾನಗಲ್ ಕ್ಷೇತ್ರ, ಸಿಂದಗಿ ಮನಗುಳಿ ನಿಧನದಿಂದ ತೆರವಾಗಿರುವ ಕ್ಷೇತ್ರಕ್ಕೆ ಚುನಾವಣೆ ನಡೆಯಲಿದೆ. ಮೊನ್ನೆಯ ಕೋರ್ ಕಮಿಟಿ ಸಭೆಯಲ್ಲಿ ಅಭ್ಯರ್ಥಿಗಳ ಬಗ್ಗೆ ಚರ್ಚೆಯಾಗಿದೆ. ಎರಡು ಕ್ಷೇತ್ರಗಳಿಗೂ ವೀಕ್ಷಕರರನ್ನು ಕಳುಹಿಸಿ ಕೊಡುತ್ತೇವೆ ಎಂದರು.

ಅಭ್ಯರ್ಥಿ ಅಯ್ಕೆ ಬಗ್ಗೆ ಸ್ಥಳೀಯರಿಂದ ಅಭಿಪ್ರಾಯ ಪಡೆದು, ತೀರ್ಮಾನ ಮಾಡುತ್ತೇವೆ. ಎರಡು ಕ್ಷೇತ್ರಗಳಲ್ಲೂ ಗೆಲ್ಲುವ ವಿಶ್ವಾಸವಿದೆ ಎಂದು ಸಿಎಂ ಬೊಮ್ಮಾಯಿ ಹೇಳಿದರು.

ಇದನ್ನೂ ಓದಿ:ಸಾಮೂಹಿಕ ನಾಯಕತ್ವದಲ್ಲಿ ಉಪ ಚುನಾವಣೆಯಲ್ಲಿ ಚರ್ಚೆ: ಎಚ್.ಡಿ.ಕುಮಾರಸ್ವಾಮಿ

ಯಾದಗಿರಿ, ಬೆಂಗಳೂರಿನ ಬ್ಯಾಡರಹಳ್ಳಿಗಳಲ್ಲಿ ಮತಾಂತರ ಆರೋಪಗಳ ಹಿನ್ನೆಲೆಯಲ್ಲಿ ಮಾತನಾಡಿದ ಸಿಎಂ, ಅಲ್ಲಲ್ಲಿ ಮತಾಂತರ ನಡೆಯುತ್ತಿರುವ ಘಟನೆ ನಡೀತಿದೆ. ಇಂಥದ್ದಕ್ಕೆಲ್ಲ ಅವಕಾಶ ಕೊಡದಂತೆ ಜಿಲ್ಲಾಧಿಕಾರಿಗೆ ಸೂಚಿಸಲಾಗಿದೆ. ಬಲವಂತದ ಮತಾಂತರ ತಡೆಯಲು ಕಾನೂನು ತರುತ್ತೇವೆ ಎಂದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next