Advertisement

ಹೊಸ ವರ್ಷ ಸಂಭ್ರಮಾಚರಣೆಗೆ ಎಲ್ಲಾದರೂ ಹೋಗಲಿ, ಆದರೆ..: ಸಿಎಂ ಎಚ್ಚರಿಕೆ

12:01 PM Dec 27, 2021 | Team Udayavani |

ಬೆಂಗಳೂರು: ಹೊಸ ವರ್ಷದ ಸಂಭ್ರಮಾಚರಣೆಗೆ ಜನರು ಎಲ್ಲಿ ಬೇಕಾದರೂ ಹೋಗಲಿ. ಆದರೆ ಕೋವಿಡ್ ನಿಯಮಗಳನ್ನು ಪಾಲಿಸಿ ಸಂಭ್ರಮಾಚರಣೆ ಮಾಡಲಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

Advertisement

ನ್ಯೂ ಇಯರ್ ಆಚರಣೆಗೆ ಪ್ರವಾಸಿ ತಾಣ, ರೆಸಾರ್ಟ್ ಗಳಿಗೆ ಮುಗಿಬೀಳುತ್ತಿರುವ ವಿಚಾರದ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಭ್ರಮಾಚರಣೆಗೆ ಎಲ್ಲಾದರೂ ಹೋಗಲಿ. ಆದರೆ ಕೋವಿಡ್ ನಿಯಮಗಳನ್ನು ಅನುಸರಿಸಲಿ. ಅವರಿಗೆ ಎಲ್ಲಿಗೆ ಬೇಕಾದರೂ ಹೋಗುವ ಸ್ವಾತಂತ್ರ್ಯವಿದೆ. ನಿಯಮ ಪಾಲಿಸಿ ಸಂಭ್ರಮಾಚರಣೆ ಮಾಡಲಿ ಎಂದರು.

ಇದನ್ನೂ ಓದಿ:ರಾಜ್ಯ ಬಿಜೆಪಿಯ ವಿಚಾರಗಳನ್ನು ಪಕ್ಷದ ಹೈಕಮಾಂಡ್ ಗಮನಿಸುತ್ತಿದೆ: ಸಿಎಂ ಬೊಮ್ಮಾಯಿ

ನೈಟ್ ಕರ್ಫ್ಯೂಗೆ ವಿರೋಧ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ರಾತ್ರಿ ಕರ್ಫ್ಯೂವನ್ನು ಆರೋಗ್ಯ ದೃಷ್ಟಿಯಿಂದ ಜಾರಿ ಮಾಡಲಾಗಿದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next