Advertisement

ಮತ್ತೆ ದೆಹಲಿಗೆ ತೆರಳಲಿರುವ ಸಿಎಂ ಬೊಮ್ಮಾಯಿ: ಜೆ.ಪಿ.ನಡ್ಡಾ, ಅರುಣ್ ಸಿಂಗ್ ಭೇಟಿ

12:12 PM Sep 30, 2021 | Team Udayavani |

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಮತ್ತೆ ದೆಹಲಿಗೆ ತೆರಳಲಿದ್ದಾರೆ. ಅಕ್ಟೋಬರ್ 8 ರಂದು ದೆಹಲಿಗೆ ಸಿಎಂ ಪ್ರಯಾಣ ಮಾಡಲಿದ್ದು, ಎರಡು ದಿನಗಳ ಕಾಲ ರಾಷ್ಟ್ರ ರಾಜಧಾನಿಯಲ್ಲಿ ಬಿಜೆಪಿ ನಾಯಕರು, ಕೇಂದ್ರ ಸಚಿವರನ್ನು ಭೇಟಿಯಾಗಲಿದ್ದಾರೆ.

Advertisement

ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾದ ಬಳಿಕ ಇದೀಗ ನಾಲ್ಕನೇ ಬಾರಿಗೆ ದೆಹಲಿ ಪ್ರವಾಸ ಮಾಡುತ್ತಿದ್ದಾರೆ. ಈ ಬಾರಿ ದೆಹಲಿ ಭೇಟಿಯ ಸಮಯದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಬಿಜೆಪಿ ಕರ್ನಾಟಕ ಉಸ್ತುವಾರಿ ಅರುಣ್ ಸಿಂಗ್ ಅವರನ್ನು ಭೇಟಿ ಮಾಡಲಿದ್ದಾರೆ.

ಇದನ್ನೂ ಓದಿ:ಕೇಜ್ರಿವಾಲ್ ಸಲಹೆ ನಮಗೆ ಅಗತ್ಯವಿಲ್ಲ: ಪಂಜಾಬ್ ಸಚಿವ ಕಿಡಿ

ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಭೇಟಿಗೆ ಸಿಎಂ ಬೊಮ್ಮಾಯಿ ಈಗಾಗಲೇ ಸಮಯ ಕೇಳಿದ್ದಾರೆ. ಈ ಪ್ರವಾಸದ ಸಂದರ್ಭದಲ್ಲಿ ವಿವಿಧ ಕೇಂದ್ರ ಸಚಿವರನ್ನೂ ಸಿಎಮ ಬೊಮ್ಮಾಯಿ ಭೇಟಿ ಮಾಡಲಿದ್ದಾರೆ.

ಉಪಚುನಾವಣೆಯ ಬಗ್ಗೆ ಮಹತ್ವದ ಚರ್ಚೆ ನಡೆಯುವ ಸಾಧ್ಯತೆಯಿದೆ ಎನ್ನಲಾಗಿದೆ. ರಾಜ್ಯದ ಹಾನಗಲ್ ಮತ್ತು ಸಿಂದಗಿ ವಿಧಾನಸಭೆ ಕ್ಷೇತ್ರಗಳಿಗೆ ಉಪ ಚುನಾವಣೆ ಘೋಷಣೆಯಾಗಿದೆ. ಅ.30ರಂದು ಎರಡೂ ಕಡೆ ಉಪ ಚುನಾವಣೆ ನಡೆಯಲಿದ್ದು, ಈ ನಿಟ್ಟಿನಲ್ಲಿ ಬೊಮ್ಮಾಯಿ ದೆಹಲಿ ಭೇಟಿ ಮಹತ್ವ ಪಡೆದಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next