Advertisement

ಸಂಪುಟ ವಿಸ್ತರಣೆ?: ಸಿಎಂ ಬೊಮ್ಮಾಯಿ ಇಂದು ದಿಲ್ಲಿಗೆ 

12:40 AM Aug 25, 2021 | Team Udayavani |

ಬೆಂಗಳೂರು: ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾಗಿ ಆ. 28ಕ್ಕೆ ಒಂದು ತಿಂಗಳು ತುಂಬಲಿದೆ. ಇದಕ್ಕೆ ಪೂರಕವಾಗಿ ಶೀಘ್ರ ಸಂಪುಟ ವಿಸ್ತರಣೆಯಾಗುವ ಸಾಧ್ಯತೆಗಳಿವೆ.

Advertisement

ಸಿಎಂ ಬುಧವಾರ ಹೊಸ ದಿಲ್ಲಿಗೆ ತೆರಳಲಿದ್ದು, ಖಾಲಿ ಇರುವ ನಾಲ್ಕು ಸ್ಥಾನಗಳನ್ನು ಭರ್ತಿ ಮಾಡುವ ಬಗ್ಗೆ ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ ಜತೆಗೆ ಚರ್ಚಿಸುವ ಸಾಧ್ಯತೆ ಇದೆ. ಸೆ. 13ರಂದು ವಿಧಾನ ಸಭೆ ಅಧಿವೇಶನ ಆರಂಭವಾಗಲಿದ್ದು, ಇದಕ್ಕೆ ಮುನ್ನ ಸಂಪುಟ ವಿಸ್ತರಣೆಯಾಗುವ ಸಾಧ್ಯತೆಗಳು ಇವೆ.

ಆನಂದ್‌ ಸಿಂಗ್‌ ಅಧಿಕಾರ ಸ್ವೀಕಾರ:

ಬಯಸಿದ ಖಾತೆ ಸಿಗಲಿಲ್ಲ ಎಂದು ಮುನಿಸಿದ್ದ ಸಚಿವ ಆನಂದ್‌ ಸಿಂಗ್‌ ಕೊನೆಗೂ ಅಧಿಕಾರ ಸ್ವೀಕರಿಸಿದ್ದಾರೆ. ವಿಕಾಸ ಸೌಧ ಕಚೇರಿಗೆ ಸಚಿವ ಆರ್‌. ಅಶೋಕ್‌, ಶಾಸಕ ರಾಜು ಗೌಡ ಜತೆಗೆ ಆಗಮಿಸಿದ ಸಿಂಗ್‌, ಒಲ್ಲದ ಮನಸ್ಸಿನಿಂದಲೇ ಅಧಿಕಾರ ಸ್ವೀಕರಿಸಿದರು.

ಬಿಎಸ್‌ವೈ ಒತ್ತಡ :

Advertisement

ಯಡಿಯೂರಪ್ಪ ತಮ್ಮ ಪುತ್ರ ಬಿ.ವೈ. ವಿಜಯೇಂದ್ರ ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಒತ್ತಡ ಹೇರುತ್ತಿದ್ದಾರೆ. ಯೋಗೇಶ್ವರ್‌, ಬಸನಗೌಡ ಪಾಟೀಲ ಯತ್ನಾಳ್‌, ಅರವಿಂದ ಬೆಲ್ಲದ ಅವರಿಗೆ ಅವಕಾಶ ನೀಡಿ ದರೆ, ವಿಜಯೇಂದ್ರ ಅವರಿಗೂ ನೀಡ ಬೇಕೆಂಬ ಷರತ್ತು ಹಾಕಿದ್ದಾರೆ ಎನ್ನಲಾಗುತ್ತಿದೆ.

ಸಂಪುಟದಲ್ಲಿ  ಖಾಲಿ ಇರುವ ನಾಲ್ಕು ಸ್ಥಾನ ಗಳನ್ನು ಭರ್ತಿ ಮಾಡಲು ಪಕ್ಷದ ಅಧ್ಯಕ್ಷರ ಜತೆ ಚರ್ಚೆ ನಡೆಸುತ್ತೇನೆ. ಅವರ ಅಭಿಪ್ರಾಯ ಪಡೆದು ಮುಂದುವರಿಯುತ್ತೇನೆ.– ಬಸವರಾಜ ಬೊಮ್ಮಾಯಿ, ಮುಖ್ಯಮಂತ್ರಿ

Advertisement

Udayavani is now on Telegram. Click here to join our channel and stay updated with the latest news.

Next