Advertisement

ಆಪ್ತ ಸ್ನೇಹಿತ ರಾಜು ಪಾಟೀಲ್ ನಿಧನಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಸಂತಾಪ

08:59 PM Sep 15, 2021 | Team Udayavani |

ಬೆಂಗಳೂರು: ಸೋದರ ಸಂಬಂಧಿ ಹಾಗೂ ಆಪ್ತ ಸ್ನೇಹಿತ ರಾಜು ಪಾಟೀಲ್ ಅವರ ನಿಧನಕ್ಕೆ ಮುಖ್ಯಮಂತ್ರಿ ‌ಬಸವರಾಜ ಬೊಮ್ಮಾಯಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

Advertisement

ರಾಜು ಪಾಟೀಲ್ ಅವರು ಪತ್ನಿ, ಪುತ್ರಿಯನ್ನು ಅಗಲಿದ್ದಾರೆ.

ರಾಜು ಪಾಟೀಲ್ ಒಬ್ಬ ಆಪ್ತ ಮಿತ್ರರಾಗಿದ್ದರು. ನಾವಿಬ್ಬರು ಬಾಲ್ಯದಿಂದ ಕೂಡಿಯೇ  ಬೆಳೆದವರು. ನಾನು ಹುಬ್ಬಳ್ಳಿಯಲ್ಲಿ ಇದ್ದಾಗ ಅವರು ಸದಾ ನನ್ಮ ಜತೆ ಇರುತ್ತಿದ್ದರು. ಅವರ ಅಗಲಿಕೆ ನನಗೆ ಅತೀವ ದುಃಖ ತರಿಸಿದೆ. ಅವರು ಇಷ್ಟು ಬೇಗ ನಮ್ಮನ್ನು ಅಗಲುತ್ತಾರೆ ಅಂದುಕೊಂಡಿರಲಿಲ್ಲ ಎಂದು ಸಿಎಂ ಬಸವರಾಜ ಬೊಮ್ಮಾಯಿ ಕಂಬನಿ ಮಿಡಿದಿದ್ದಾರೆ.

ಅವರ ನಿಧನದ ದುಃಖವನ್ನು ಭರಿಸುವ ಶಕ್ತಿಯನ್ನು ಆ ದೇವರು ಅವರ ಕುಟುಂಬದವರಿಗೆ ನೀಡಲಿ ಎಂದು ಭಗವಂತನಲ್ಲಿ ಕೋರತ್ತೇನೆ ಎಂದು ಹೇಳಿದ್ದಾರೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next