Advertisement

ನಾಳೆ ಕೆಆರ್‌ಎಸ್‌ ಜಲಾಶಯಕ್ಕೆ ಸಿಎಂ ಬಾಗಿನ

05:22 PM Nov 01, 2021 | Team Udayavani |

ಶ್ರೀರಂಗಪಟ್ಟಣ: ಕೆಆರ್‌ಎಸ್‌ ಜಲಾಶಯ ಸಂಪೂರ್ಣ ಭರ್ತಿ ಹಿನ್ನೆಲೆಯಲ್ಲಿ ಈ ಬಾರಿ ತುಂಬಿದ ಕಾವೇರಿಗೆ ಬಾಗಿನ ಅರ್ಪಿಸಲು ಮುಖ್ಯಮಂತ್ರಿ ಬಸವರಾಜು ಬೊಮ್ಮಾಯಿ ಆಗಮಿಸುವುದರಿಂದ ಜಿಲ್ಲಾಧಿಕಾರಿ ಡಾ.ಅಶ್ವಥಿ ಸ್ಥಳ ಪರಿಶೀಲಿಸಿದರು.

Advertisement

ನ.02 ರಂದು ಬೆಂಗಳೂರಿನಿಂದ ಕೆಆರ್‌ಎಸ್‌ ಹೆಲಿಪ್ಯಾಡ್‌ಗೆ ಹೆಲಿಕ್ಯಾಪ್ಟರ್‌ ಮೂಲಕ ಬಂದು ಇಳಿಯಲಿದ್ದಾರೆ. ಮಧ್ಯಾಹ್ನ 1ಗಂಟೆಗೆ ಜಲಾಶಯಕ್ಕೆ ಬಾಗಿನ ನೀಡಲಿದ್ದಾರೆ. ನಂತರ ಕಾವೇರಿ ಪ್ರತಿಮೆಗೆ ಪೂಜೆ ಸಲ್ಲಿಸಿ, ವೇದಿಕೆಯಲ್ಲಿ ಕಾರ್ಯಕ್ರಮ ಕುರಿತು ಮಾತನಾಡಲಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಕೆ.ಸಿ.ನಾರಾಯಣಗೌಡ, ಶಾಸಕ ರವೀಂದ್ರ ಶ್ರೀಕಂಠಯ್ಯ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ಮಾಹಿತಿಯಲ್ಲಿ ತಿಳಿದು ಬಂದಿದೆ.

ಇದನ್ನೂ ಓದಿ:-ʼರಾಜಕುಮಾರ’ ಸಿನಿಮಾ ಉಚಿತ ಪ್ರದರ್ಶನ

ಅದೇ ದಿನ ಕಬಿನಿ ಜಲಾಶಯಕ್ಕೂ ಬಾಗಿನ ಅರ್ಪಿಸಲಿದ್ದಾರೆ. ಜಲಾಶಯಕ್ಕೆ ಬಾಗಿನ ಅರ್ಪಿಸುವ ಹಿನ್ನೆಲೆ ಜಿಲ್ಲಾಧಿಕಾರಿಗಳು ಜಲಾಶಯ ಸುತ್ತಮುತ್ತ ಸ್ಥಳ ಪರಿಶೀಲನೆ ನಡೆಸಿ ಪೊಲೀಸರ ಬಿಗಿ ಭದ್ರತೆಗೆ ಸಿದ್ಧತೆ ನಡೆಸಿದ್ದಾರೆ. ಉಪವಿಭಾಗಾಧಿಕಾರಿ ಬಿ.ಸಿ.ಶಿವಾನಂದ ಮೂರ್ತಿ, ತಹಶೀಲ್ದಾರ್‌ ಶ್ವೇತಾ ಇತರ ನೀರಾವರಿ ಅಧಿಕಾರಿಗಳು ಜೊತೆಯಲ್ಲಿದ್ದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next