Advertisement

ಬ್ರಾಹ್ಮಣ ಮಂಡಳಿ, ಆರ್ಯ ವೈಶ್ಯ ನಿಗಮಕ್ಕೆ ತಲಾ 10 ಕೋಟಿ ಹೆಚ್ಚುವರಿ ಅನುದಾನ

10:47 PM Feb 16, 2023 | Team Udayavani |

ಬೆಂಗಳೂರು: ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಮತ್ತು ಕರ್ನಾಟಕ ಆರ್ಯವೈಶ್ಯ ಸಮುದಾಯ ಅಭಿವೃದ್ಧಿ ನಿಗಮಕ್ಕೆ ತಲಾ 10 ಕೋಟಿ ಹೆಚ್ಚುವರಿ ಅನುದಾನವನ್ನು ಇದೇ ಆರ್ಥಿಕ ವರ್ಷದಲ್ಲಿ ಕೊಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

Advertisement

ಪ್ರಶ್ನೋತ್ತರ ಅವಧಿಯಲ್ಲಿ ಜೆಡಿಎಸ್‌ ಸದಸ್ಯ ಟಿ.ಎ. ಶರವಣ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಯವರು, ಈ ಬಾರಿಯ ಲೇಖಾನುದಾನದಲ್ಲಿ ಇದಕ್ಕೆ ಅವಕಾಶ ಮಾಡಿಕೊಡಲಾಗುವುದು ಎಂದು ಭರವಸೆ ನೀಡಿದರು.

ಹೆಚ್ಚುವರಿ ಅನುದಾನ ಕೋರಿ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಹಾಗೂ ಕರ್ನಾಟಕ ಆರ್ಯವೈಶ್ಯ ಸಮುದಾಯ ಅಭಿವೃದ್ಧಿ ನಿಗಮ ಪ್ರಸ್ತಾವನೆ ಸಲ್ಲಿಸಿರುವುದು ಸರಕಾರದ ಗಮನಕ್ಕೆ ಬಂದಿದೆ. 2022-23ನೇ ಸಾಲಿನಲ್ಲಿ ಬ್ರಾಹ್ಮಣ ಅಭಿವೃದ್ಧಿ ಮಂಡಳಿ 60 ಕೋಟಿ ರೂ. ಹೆಚ್ಚುವರಿ ಅನುದಾನ ಕೋರಿದೆ. ಆದರೆ, ಮಂಡಳಿಯ ಬ್ಯಾಂಕ್‌ ಖಾತೆಯಲ್ಲಿ 6.15 ಕೋಟಿ ರೂ. ಇದ್ದು, ಹಾಗೂ 2022-23ನೇ ಸಾಲಿನಲ್ಲಿ ಒದಗಿಸಿರುವ 3 ಕೋಟಿ ಅನುದಾನ ವೆಚ್ಚವಾಗದೇ ಉಳಿದ ಕಾರಣ ಹೆಚ್ಚುವರಿ ಅನುದಾನ ಒದಗಿಸಿರುವುದಿಲ್ಲ.

ಅದೇ ರೀತಿ 2022-23ನೇ ಆರ್ಥಿಕ ಸಾಲಿಗೆ ಕರ್ನಾಟಕ ಆರ್ಯವೈಶ್ಯ ಸಮುದಾಯ ಅಭಿವೃದ್ಧಿ ನಿಗಮಕ್ಕೆ ಬಜೆಟ್‌ನಲ್ಲಿ 5 ಕೋಟಿ ರೂ. ನಿಗದಿಯಾಗಿದ್ದು, ಶೇ.50ರಷ್ಟು ಖರ್ಚಾಗದೇ ಉಳಿದಿರುವುರಿಂದ ಹೆಚ್ಚುವರಿ ಅನುದಾನದ ಪ್ರಸ್ತಾವನೆ ಅನುಮೋದಿಸಿರು­ವುದಿಲ್ಲ ಎಂದು ಮುಖ್ಯಮಂತ್ರಿಯವರು ಮಾಹಿತಿ ನೀಡಿದರು.

Advertisement

Udayavani is now on Telegram. Click here to join our channel and stay updated with the latest news.

Next