Advertisement

ಪಕ್ಷದ ಶಾಸಕರ ಅಹವಾಲು ಸ್ವೀಕರಿಸಿದ ಸಿಎಂ

10:49 PM Sep 30, 2021 | Team Udayavani |

ಬೆಂಗಳೂರು:  ಶಾಸಕರಿಗೆ ಮುಖ್ಯಮಂತ್ರಿಯವರು ಭೇಟಿಗೆ ಸಿಗುತ್ತಿಲ್ಲ ಎಂಬ ಆರೋಪವನ್ನು ಹೋಗಲಾಡಿಸಲು  ಬಸವರಾಜ ಬೊಮ್ಮಾಯಿ ಅವರು ಪ್ರತಿ ಗುರುವಾರ ಪಕ್ಷದ ಶಾಸಕರು ಹಾಗೂ ಸಂಸದರಿಗೆ ಭೇಟಿ ಅವಕಾಶ ನೀಡಿದ್ದು, ಅದರಂತೆ  ಶಾಸಕರ ಅಹವಾಲುಗಳನ್ನು ಆಲಿಸಿದರು.

Advertisement

ಜತೆಗೆ ಮುಕ್ತ ಹಾಗೂ ಲೋಕಾಭಿರಾಮವಾಗಿ ಮಾತನಾಡಿ ಶಾಸಕರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

ರೇಸ್‌ಕೋರ್ಸ್‌ ರಸ್ತೆಯ  ಸರಕಾರಿ ಕಚೇರಿಯಲ್ಲಿ ಗುರುವಾರ ಬೆಳಗ್ಗೆ 10ರಿಂದ ಮಧ್ಯಾಹ್ನ 3 ಗಂಟೆಯವರೆಗೆ  ಪ್ರತಿಯೊಬ್ಬ ಶಾಸಕರಿಂದಲೂ ಕ್ಷೇತ್ರ ಗಳ ಸಮಸ್ಯೆಗಳನ್ನು ಪ್ರತ್ಯೇಕವಾಗಿ ಆಲಿಸಿ, ಸ್ಥಳದಲ್ಲಿಯೇ ಪರಿಹಾರ ಕಲ್ಪಿಸುವ ಕೆಲಸ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

ಕೆಲವರು ಸಮಸ್ಯೆಗಳ ದೊಡ್ಡ ಪಟ್ಟಿಯನ್ನೇ ಹಿಡಿದುಕೊಂಡಿದ್ದರೂ ಎಲ್ಲವನ್ನೂ ಶಾಂತವಾಗಿ ಆಲಿಸಿದರು. ಸಾಧ್ಯವಾದವುಗಳಿಗೆ ಸ್ಥಳದಲ್ಲೇ ಪರಿಹಾರಕ್ಕೆ ಕ್ರಮ ಕೈಗೊಂಡರು.

Advertisement

Udayavani is now on Telegram. Click here to join our channel and stay updated with the latest news.

Next