Advertisement

ಉಷಾ ಮಂಗೇಶ್ಕರ್ ಗೆ ಕರೆ ಮಾಡಿ ಸಾಂತ್ವನ ಹೇಳಿದ ಸಿಎಂ ಬೊಮ್ಮಾಯಿ

05:59 PM Feb 06, 2022 | Team Udayavani |

ಬೆಂಗಳೂರು: ಭಾರತ ರತ್ನ, ಪ್ರಖ್ಯಾತ ಗಾಯಕಿ ಲತಾ ಮಂಗೇಶ್ಕರ್ ನಿಧನ ಹೊಂದಿದ ಹಿನ್ನೆಲೆಯಲ್ಲಿ ಲತಾ ಮಂಗೇಶ್ಕರ್ ಅವರ ಕುಟುಂಬಕ್ಕೆ ದೂರವಾಣಿ ಮೂಲಕ ಸಿಎಂ ಬಸವರಾಜ್ ಬೊಮ್ಮಾಯಿ ಸಂತಾಪ ಸೂಚಿಸಿದ್ದಾರೆ.

Advertisement

ಲತಾ ಸಹೋದರಿ ಉಷಾ ಮಂಗೇಶ್ಕರ್ ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿದ ಸಿಎಂ, ಲತಾ ಮಂಗೇಶ್ಕರ್ ಅವರು ಭಾರತದ ನೈಟಿಂಗೇಲ್ ,ಹಲವು ತಲೆಮಾರುಗಳ ಜನರ ಉಸಿರಿನ ಜೊತೆ ಅವರು ಜೀವಂತವಾಗಿರುತ್ತಾರೆ. ದೇಶದ ಜನರ ಮನಸಿನಲ್ಲಿ ಲತಾ ಮಂಗೇಶ್ಕರ್ ವಿಶೇಷ ಸ್ಥಾನ ಪಡೆದಿದ್ದಾರೆ. ಅಂಥ ಮಹಾನ್ ಗಾಯಕಿ ಯನ್ನು ನಾವು ಕಳೆದುಕೊಂಡಿದ್ದೇವೆ. ಕರ್ನಾಟಕದಲ್ಲಿ ಲತಾ ನಿಧನದ ಹಿನ್ನೆಲೆಯಲ್ಲಿ ಶೋಕಾಚರಣೆಗೆ ಆದೇಶಿಸಲಾಗಿದೆ ಎಂದು ದೂರವಾಣಿಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ : ಲತಾ ಮಂಗೇಶ್ಕರ್ ಅವರ ಗೌರವಾರ್ಥ ರಾಜ್ಯದಲ್ಲಿ ಎರಡು ದಿನಗಳ ಶೋಕಾಚರಣೆ

Advertisement

Udayavani is now on Telegram. Click here to join our channel and stay updated with the latest news.

Next