Advertisement

ಹಜ್ ಯಾತ್ರಾರ್ಥಿಗಳಿಗೆ ಶುಭಕೋರಿದ ಸಿಎಂ ಬೊಮ್ಮಾಯಿ

08:50 PM Jun 08, 2022 | Team Udayavani |

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬುಧವಾರ ಬೆಂಗಳೂರಿನ ಹಜ್ ಭವನದಲ್ಲಿ ಆಯೋಜಿಸಲಾಗಿದ್ದ ಸಮಾರಂಭದಲ್ಲಿ ಪವಿತ್ರ ಹಜ್ ಯಾತ್ರೆ ಕೈಗೊಳ್ಳಲಿರುವ ಮೊದಲ ತಂಡದ ಯಾತ್ರಾರ್ಥಿಗಳಿಗೆ ಶುಭಕೋರಿದರು.

Advertisement

ಹಜ್ ಗೆ ತೆರಳಲಿರುವ ಮೊದಲ ವಿಮಾನಕ್ಕೆ ಸಿಎಂ ಚಾಲನೆ ನೀಡಿದರು. ಒಟ್ಟು 450 ಜನ ನಾಳೆ ಗುರುವಾರ ಮೊದಲ ವಿಮಾನದ ಮೂಲಕ ಹಜ್ ಯಾತ್ರೆ ಕೈಗೊಳ್ಳಲಿದ್ದಾರೆ.

ಸಮಾರಂಭದಲ್ಲಿ ವಕ್ಫ್ ಮಂಡಳಿ ಅಧ್ಯಕ್ಷ ಮೌಲಾನ ಶಾಪಿ ಸಾದಿ, ಹಜ್ ಕಮಿಟಿ ಅಧ್ಯಕ್ಷ ರವುಫ್ ಉದ್ದೀನ್ ಕಚೇರೆವಾಲೆ, ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ಅಬ್ದುಲ್ ಅಜೀಮ್, ಸಂಸದ ನಾಸೀರ್ ಹುಸೇನ್ , ಕಾಂಗ್ರೆಸ್ ನಾಯಕರಾದ ಯು.ಟಿ.ಖಾದರ್ ಮೊದಲಾದವರು ಉಪಸ್ಥಿತರಿದ್ದರು.

Advertisement

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next