Advertisement

ಸಿಎಂ ಬೊಮ್ಮಾಯಿ ಶಾಸಕರ ಪ್ರತಿಭೆಗೆ ತಕ್ಕಂತೆ ಸಚಿವ ಸ್ಥಾನ ನೀಡಿದ್ದಾರೆ: ಈಶ್ವರಪ್ಪ

02:05 PM Aug 07, 2021 | Team Udayavani |

ಶಿವಮೊಗ್ಗ: ಮುಖ್ಯಮಂತ್ರಿ ಬಸವರಾಜ‌ ಬೊಮ್ಮಯಿ ಅವರು ಶಾಸಕರ ಪ್ರತಿಭೆಗೆ ತಕ್ಕಂತೆ ಸಚಿವ ಸ್ಥಾನ ನೀಡಿದ್ದಾರೆ. ಶಾಸಕರ ಆಸಕ್ತಿಗೆ ತಕ್ಕಂತೆ ಖಾತೆಗಳನ್ನು ಹಂಚಿಕೆ ಮಾಡಿರುವುದು ನನಗೆ ಸಂತಸ ತಂದಿದೆ ಎಂದು ಗ್ರಾಮೀಣಾಭಿವೃದ್ಧಿ ಇಲಾಖೆ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಸಕರು ತಮಗೆ ಸಿಕ್ಕಿರುವ ಖಾತೆಗಳನ್ನು ಸದ್ಬಳಕೆ ಮಾಡಿಕೊಂಡು ಉತ್ತಮ ಕೆಲಸ ಮಾಡಬೇಕು ಎಂದು ಹೇಳಿದರು.

ಇದನ್ನೂ ಓದಿ:‘ಜನತಾ ಪರಿವಾರ ಸರ್ಕಾರ’ದ ಛಾಯೆ ಕಳೆಯಲು ಸಂಘ ಹಿನ್ನೆಲೆಯವರಿಗೆ ಬಂಪರ್: ಏನಿದು ಲೆಕ್ಕಾಚಾರ?

ಶಿವಮೊಗ್ಗ ಜಿಲ್ಲೆಗೆ ಎರಡು ಪ್ರಮುಖ ಖಾತೆ ಸಿಕ್ಕಿರುವುದು ಜಿಲ್ಲೆಯ ಜನರಿಗೆ ಸಂತಸ ತಂದಿದೆ. ನನ್ನ ಅಚ್ಚುಮೆಚ್ಚಿನ ಖಾತೆ ಗ್ರಾಮೀಣಾಭಿವೃದ್ಧಿ ಇಲಾಖೆ ಮತ್ತು ಪಂಚಾಯತ್‌ ರಾಜ್ ಇಲಾಖೆ ಸಿಕ್ಕಿರುವುದು ಖುಷಿ ತಂದಿದೆ. ಜಿಲ್ಲೆಯ ಇನ್ನೊಬ್ಬ ಶಾಸಕ ಅರಗ ಜ್ಞಾನೇಂದ್ರ ಅವರಿಗೆ ಗೃಹ ಇಲಾಖೆ‌ ಸಿಕ್ಕಿರುವುದು ಸಂತಸ ತಂದಿದೆ ಎಂದು ಈಶ್ವರಪ್ಪ ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next