Advertisement

ಮಳೆ ಹಾನಿ ಸಂಬಂಧ ಮುಖ್ಯಮಂತ್ರಿ ತುರ್ತು ಸಭೆ

04:36 PM Aug 31, 2022 | Team Udayavani |

ಬೆಂಗಳೂರು:  ನಿರಂತರವಾಗಿ ಸುರಿದ ಮಳೆಯಿಂದ ಉಂಟಾದ ಹಾನಿಯ ಬಗ್ಗೆ ಹಿರಿಯ ಅಧಿಕಾರಿಗಳೊಂದಿಗೆ  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಗೃಹ ಕಚೇರಿ ಕೃಷ್ಣದಲ್ಲಿ ಸಂಜೆ 6:00 ಗಂಟೆಗೆ ಸಭೆ ನಡೆಸಲಿದ್ದಾರೆ.

Advertisement

ನಿರಂತರ ಮಳೆಯಿಂದ ರಾಜಾಧಾನಿ ಬೆಂಗಳೂರಿನಲ್ಲಿ ಅಪಾರ ಹಾನಿಯಾಗಿದೆ. ರಸ್ತೆಗಳು ಗುಂಡಿ ಬಿದ್ದಿದ್ದು, ಸಂಚಾರ ವ್ಯವಸ್ಥೆ ದುಸ್ಥರವಾಗಿದೆ. ಈ ಬಗ್ಗೆ ನಾಗರಿಕರಿಂದ ತೀವ್ರ ಟೀಕೆ ವ್ಯಕ್ತವಾಗುತ್ತಿದ್ದರೂ ಸರಕಾರ ಸ್ಪಂದಿಸುತ್ತಿಲ್ಲ ಎಂಬ ಮಾತುಗಳೂ ಕೇಳಿ ಬಂದಿವೆ.

ಬೊಮ್ಮಾಯಿ ಸರಕಾರ ಬಂದು ಒಂದು ವರ್ಷ ಕಳೆದರೂ ಬೆಂಗಳೂರು ಉಸ್ತುವಾರಿ ಸಚಿವ ರನ್ನು ನೇಮಕ ಮಾಡುವುದಕ್ಕೆ ಇನ್ನೂ ಸಾಧ್ಯವಾಗಿಲ್ಲ ‌. ಖುದ್ದು ಬೊಮ್ಮಾಯಿ ಅವರೇ ಬೆಂಗಳೂರು ನಗರ ಉಸ್ತುವಾರಿ ಜವಾಬ್ದಾರಿ ನಿರ್ವಹಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ತುರ್ತು ಸಭೆ ಕರೆದಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next