Advertisement

ಅಮಿತ್ ಶಾ ಜತೆ ಸಿಎಂ ಬೊಮ್ಮಾಯಿ ಲಂಚ್ ಪೇ ಚರ್ಚೆ?: ರಾಜ್ಯ ಪ್ರವಾಸದ ವೇಳೆ ಮಹತ್ವದ ಸಭೆ

01:27 PM Apr 30, 2022 | Team Udayavani |

ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಬೆಂಗಳೂರು ಭೇಟಿ ಸಂದರ್ಭದಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ಭೋಜನ ವ್ಯವಸ್ಥೆ ಕಲ್ಪಿಸಿದ್ದಾರೆ ಎಂಬ ಸುದ್ದಿ ಬಿಜೆಪಿ ವಲಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದ್ದು, ಆಯ್ದ ಕೆಲವರು ಮಾತ್ರ ಇದರಲ್ಲಿ ಭಾಗಿಯಾಗುವ ಸಾಧ್ಯತೆ ಇದೆ.

Advertisement

ಅಮಿತ್ ಶಾ ಅವರಿಗೆ ಬೊಮ್ಮಾಯಿ ವಿಶೇಷ ಭೋಜನ ವ್ಯವಸ್ಥೆ ಮಾಡಿದ್ದಾರೆ. ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಸೇರಿದಂತೆ ಆಯ್ದ ಪ್ರಮುಖರು ಹಾಗೂ ಸಚಿವರು ಈ ಭೋಜನ ಸಭೆಯಲ್ಲಿ ಭಾಗಿಯಾಗುವ ಸಾಧ್ಯತೆಯಿದೆ.

ಇದೇ ಸಭೆಯಲ್ಲಿ ರಾಜ್ಯ ಸಚಿವ ಸಂಪುಟ ಪುನಾರ್ರಚನೆ ಅಥವಾ ವಿಸ್ತರಣೆಯ ಸ್ವರೂಪ ನಿರ್ಧಾರವಾಗಲಿದೆ. ಈ ಕಾರಣಕ್ಕಾಗಿಯೇ ತಮ್ಮ ದಿಲ್ಲಿ ಭೇಟಿ ಸಂದರ್ಭದಲ್ಲಿ ಬೊಮ್ಮಾಯಿ ವರಿಷ್ಠರ ಭೇಟಿಗೆ ಸಮಯಾವಕಾಶ ಕೋರಿಲ್ಲ ಎಂದು ತಿಳಿದು ಬಂದಿದೆ.

ಇದನ್ನೂ ಓದಿ:ಪಿಎಸ್ಐ ಪರೀಕ್ಷೆಯಲ್ಲಿ ಅಕ್ರಮವಾಗಿದೆ ಎಂದು ನಾವೇ ಒಪ್ಪಿಕೊಂಡಿದ್ದೆವೆ: ಆರಗ ಜ್ಞಾನೇಂದ್ರ

ಅಮಿತ್ ಶಾ ರಾಜ್ಯ ಪ್ರವಾಸದ ಬಳಿಕ ರಾಜ್ಯ ರಾಜಕಾರಣಕ್ಕೆ ಸಂಬಂಧಪಟ್ಟ ಎಲ್ಲ ಗುಸುಗುಸು ಸುದ್ದಿಗಳು ಅಂತ್ಯ ಕಾಣುವ ಸಾಧ್ಯತೆ ಇದೆ ಎಂದು ಬಿಜೆಪಿ ಆಂತರಿಕ ಮೂಲಗಳು ತಿಳಿಸಿವೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next