Advertisement

ಅಮಿತ್‌ ಶಾ ಜತೆ ಸಿಎಂ ಬೊಮ್ಮಾಯಿ, ನಳಿನ್‌, ಕಾರಜೋಳ ಸಭೆ

12:40 AM Dec 27, 2022 | Team Udayavani |

ಬೆಂಗಳೂರು: ವಿಧಾನ ಸಭೆ ಚುನಾವಣೆ ಎದುರಿಸಲು ಕೈಗೊಂ ಡಿರುವ ಸಿದ್ಧತೆ ಹಾಗೂ ಸಂಪುಟ ವಿಸ್ತರಣೆ ಕುರಿತು ಕೇಂದ್ರ ಗೃಹ ಸಚಿವ ಅಮಿತ್‌ ಶಾ ನಿವಾಸದಲ್ಲಿ ಮುಖ್ಯ ಮಂತ್ರಿ ಬೊಮ್ಮಾಯಿ ಸೋಮವಾರ ಮಹತ್ವದ ಮಾತುಕತೆ ನಡೆಸಿದರು.

Advertisement

ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್‌ಕುಮಾರ್‌, ಸಚಿವ ಗೋವಿಂದ ಕಾರಜೋಳ ಜತೆ ಅಮಿತ್‌ ಶಾ ನಿವಾಸಕ್ಕೆ ತೆರಳಿದ ಮುಖ್ಯಮಂತ್ರಿ ಹಲವು ವಿಚಾರಗಳ ಬಗ್ಗೆ ಪ್ರಸ್ತಾಪಿಸಿದರು.

ವಿಧಾನಸಭೆ ಚುನಾವಣೆ ಹಿನ್ನೆಲೆ ಯಲ್ಲಿ ಈಗಾಗಲೇ ಕೈಗೊಂಡಿರುವ ಜನಸ್ಪಂದನೆ ಯಾತ್ರೆ, ಪ್ರಮುಖ ಕಾರ್ಯಕ್ರಮಗಳ ಜಾರಿ ಕುರಿತು ಅಮಿತ್‌ ಶಾ ಅವರಿಗೆ ಮುಖ್ಯಮಂತ್ರಿ ಮಾಹಿತಿ ನೀಡಿದರು. ಪಕ್ಷದ ಕಾರ್ಯಚಟುವಟಿಕೆಗಳ ಬಗ್ಗೆ ನಳಿನ್‌ಕುಮಾರ್‌ ಕಟೀಲು ವಿವರಿಸಿದರು ಎಂದು ಹೇಳಲಾಗಿದೆ. ಸಂಪುಟ ವಿಸ್ತರಣೆ ವಿಚಾರವೂ ಇದೇ ಸಂದರ್ಭದಲ್ಲಿ ಪ್ರಸ್ತಾವವಾಗಿ ಖಾಲಿ ಉಳಿದಿರುವ ಆರು ಸ್ಥಾನ ಭರ್ತಿ ಬಗ್ಗೆ ಚರ್ಚಿಸಲಾಯಿತು ಎಂದು ತಿಳಿದು ಬಂದಿದೆ.

Advertisement

Udayavani is now on Telegram. Click here to join our channel and stay updated with the latest news.

Next