Advertisement

ಶೀಘ್ರ ಅಂಜನಾದ್ರಿಗೆ ಮುಖ್ಯಮಂತ್ರಿ ಬೊಮ್ಮಾಯಿ ಭೇಟಿ

06:12 PM Mar 09, 2022 | Team Udayavani |

ಗಂಗಾವತಿ: ಪ್ರಸಕ್ತ ಸಾಲಿನ ರಾಜ್ಯದ ಬಜೆಟ್‌ನಲ್ಲಿ ಕೊಪ್ಪಳ ಜಿಲ್ಲೆಗೆ ವಿಶ್ವವಿದ್ಯಾಲಯ, ಅಂಜನಾದ್ರಿಗೆ 100 ಕೋಟಿ ನವಲಿ ಸಮನಾಂತರ ಜಲಾಶಯಕ್ಕೆ 1000 ಕೋಟಿ ಸೇರಿ ಇನ್ನೂ ಅನೇಕ ಯೋಜನೆ ಘೋಷಣೆ ಮಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಜಿಲ್ಲೆಯ ಬಿಜೆಪಿ ನಿಯೋಗ ವತಿಯಿಂದ ವಿಧಾನಸೌಧದಲ್ಲಿ ಸನ್ಮಾನಿಸಲಾಯಿತು.

Advertisement

ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾತನಾಡಿ, ಅಯೋಧ್ಯೆಯಂತೆ ರಾಮಭಕ್ತ ಹನುಮಂತ ಜನಿಸಿದ ಕಿಷ್ಕಿಂದಾ ಅಂಜನಾದ್ರಿ ಅಭಿವೃದ್ಧಿ ಕಾಣಬೇಕಿದೆ. ಸದ್ಯ ಬಜೆಟ್ ನಲ್ಲಿ ನೂರು ಕೋಟಿ ಅನುದಾನ ಮೀಸಲಿರಿಸಲಾಗಿದೆ. ಅಂಜನಾದ್ರಿಗೆ ಆಗಮಿಸುವ ಭಕ್ತರಿಗೆ ಮೂಲ ಸೌಕರ್ಯ ಮತ್ತು ಪ್ರವಾಸೋದ್ಯಮವನ್ನು ಬೆಳೆಸಲು ಸ್ಥಳೀಯರಿಗೆ ಆದ್ಯತೆ ನೀಡಲಾಗುತ್ತದೆ. ಶೀಘ್ರವೇ ಅಂಜನಾದ್ರಿಗೆ ಧಾರ್ಮಿಕ ದತ್ತಿ ಸೇರಿ ಇತರೆ ಸಚಿವರ ಜತೆ ಭೇಟಿ ನೀಡಿ ಅಗತ್ಯ ಸೌಕರ್ಯಗಳ ಕುರಿತು ಚರ್ಚೆ ನಡೆಸಲಾಗುತ್ತದೆ. ಆಂಜನೇಯ ಕಿಷ್ಕಿಂದಾ ಅಂಜನಾದ್ರಿಯಲ್ಲಿಯೇ ಜನಿಸಿದ್ದು ಎನ್ನಲು ಅನೇಕ ದಾಖಲೆಗಳಿದ್ದು ಅವುಗಳನ್ನು ಪ್ರಕಟಿಸಲಾಗುತ್ತದೆ ಎಂದು ತಿಳಿಸಿದ್ದಾರೆ.

ನಿಯೋಗದಲ್ಲಿ ಸಚಿವ ಹಾಲಪ್ಪ ಆಚಾರ್, ಸಂಸದ ಕರಡಿ ಸಂಗಣ್ಣ, ಶಾಸಕ ಪರಣ್ಣ ಮುನವಳ್ಳಿ, ಕುರಿ ಉಣ್ಣೆ ನಿಗದ ಅಧ್ಯಕ್ಷ ಶರಣು ತಳ್ಳಿಕೇರಿ, ಕಾಡಾ ಅಧ್ಯಕ್ಷ ತಿಪ್ಪೇರುದ್ರಸ್ವಾಮಿ, ಮಾಜಿ ಶಾಸಕ ಕೆ.ಶರಣಪ್ಪ, ಮಾಜಿ ಸಚಿವ ನಾಗಪ್ಪ ಸಾಲೋಣಿ, ಬಿಜೆಪಿ ಜಿಲ್ಲಾ ಮಾಜಿ ಅಧ್ಯಕ್ಷ ಸಿಂಗನಾಳ ವಿರೂಪಾಕ್ಷಪ್ಪ ಸೇರಿ ಅನೇಕರಿದ್ದರು

Advertisement

Udayavani is now on Telegram. Click here to join our channel and stay updated with the latest news.

Next