Advertisement

ವಿಐಎಸ್‌ಎಲ್‌ ಮುಚ್ಚಲ್ಲ –ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ

08:11 PM Feb 16, 2023 | Team Udayavani |

ವಿಧಾನಸಭೆ: ಯಾವುದೇ ಕಾರಣಕ್ಕೂ ಭದ್ರಾವತಿ ವಿಐಎಸ್‌ಎಲ್‌ ಕಾರ್ಖಾನೆ ಮುಚ್ಚುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪುನರುತ್ಚರಿಸಿದ್ದಾರೆ.

Advertisement

ಶೂನ್ಯ ವೇಳೆಯಲ್ಲಿ ಕಾಂಗ್ರೆಸ್‌ನ ಸಂಗಮೇಶ್‌ ಪ್ರಸ್ತಾಪಕ್ಕೆ ಉತ್ತರಿಸಿದ ಅವರು, ವಿಐಎಸ್‌ಎಲ್‌ ನಮ್ಮ ರಾಜ್ಯದ ಹೆಮ್ಮೆಯ ಸಂಕೇತ. ಉತ್ತಮವಾಗಿ ನಡೆಸಿಕೊಂಡು ಹೋಗುವವರಿಗೆ ಕೊಟ್ಟು ಉಳಿಸಿಕೊಳ್ಳಲಾಗುವುದು. ನಾನೂ ಕೆಲವು ಸಂಸ್ಥೆಗಳ ಜತೆ ಮಾತನಾಡಿದ್ದೇನೆ. ಮೊದಲಿಗೆ ಕಾರ್ಖಾನೆ ಮುಚ್ಚುವ ಪ್ರಕ್ರಿಯೆ ನಿಲ್ಲಿಸಬೇಕಿದೆ. ಕೇಂದ್ರ ಸಚಿವರ ಜತೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಇದಕ್ಕೂ ಮುನ್ನ ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಸಹ ವಿಐಎಸ್‌ಎಲ್‌ ಕಾರ್ಖಾನೆ ಮುಚ್ಚದಂತೆ ಕೇಂದ್ರದ ಜತೆ ಮಾತುಕತೆ ನಡೆಸಬೇಕು. ಕಾರ್ಖಾನೆ ಉಳಿಸಬೇಕು. ಮುಖ್ಯಮಂತ್ರಿಯವರು ಗಂಭೀರವಾಗಿ ಪರಿಗಣಿಸಬೇಕು ಎಂದು ಮನವಿ ಮಾಡಿದರು. ವಿಐಎಸ್‌ಎಲ್‌ ಕಾರ್ಖಾನೆ ಸರ್ಕಾರವೇ ವಹಿಸಿಕೊಳ್ಳಲಿ ಎಂದು ಸಂಗಮೇಶ್‌ ಒತ್ತಾಯಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next