Advertisement

ಹೆಚ್ ಎಎಲ್ ನಿಲ್ದಾಣದಲ್ಲೇ ಬಾಕಿಯಾದ ಸಿಎಂ ಬೊಮ್ಮಾಯಿ ವಿಶೇಷ ವಿಮಾನ!

10:39 AM Dec 28, 2021 | Team Udayavani |

ಬೆಂಗಳೂರು: ಹುಬ್ಬಳ್ಳಿಯಲ್ಲಿ ನಡೆಯುವ ಬಿಜೆಪಿ ಕಾರ್ಯಕಾರಿಣಿಗೆ ಹೊರಟಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಕೆಲ ಸಚಿವರಿದ್ದ ವಿಶೇಷ ವಿಮಾನ ಹೆಚ್ ಎ ಎಲ್ ವಿಮಾನ ನಿಲ್ದಾಣದಿಂದ ಟೆಕ್ ಆಫ್ ಆಗದೆ ಬಾಕಿಯಾಗಿದೆ.

Advertisement

ತಾಂತ್ರಿಕ ಕಾರಣದಿಂದ ವಿಶೇಷ ವಿಮಾನ ಹೆಚ್ ಎ ಎಲ್ ವಿಮಾನ ನಿಲ್ದಾಣದಲ್ಲೇ ಬಾಕಿಯಾಗಿದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಚಿವರಾದ ಆರ್. ಅಶೋಕ್ ಮತ್ತು ಎಸ್ ಟಿ ಸೋಮಶೇಖರ್ ಅವರು ವಿಶೇಷ ವಿಮಾನದಲ್ಲಿ ಹುಬ್ಬಳ್ಳಿ ಗೆ ತೆರಳಲಿದ್ದರು. ಹುಬ್ಬಳ್ಳಿಯಲ್ಲಿಂದು ಬಿಜೆಪಿ ಕಾರ್ಯಕಾರಿಣಿ ಸಭೆ ನಡೆಯಲಿದೆ. ಆದರೆ ವಿಶೇಷ ವಿಮಾನದಲ್ಲಿ ತಾಂತ್ರಿಕ ಕಾರಣ ಕಾಣಿಸಿಕೊಂಡ ಹಿನ್ನೆಲೆ ಇನ್ನೂ ಟೆಕ್ ಆಫ್ ಸಾಧ್ಯವಾಗಿಲ್ಲ.

ಇದನ್ನೂ ಓದಿ:ಚಿಂತನ-ಮಂಥನ ; ಇಂದಿನಿಂದ 2 ದಿನ ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸಭೆ

Koo App

Advertisement

Udayavani is now on Telegram. Click here to join our channel and stay updated with the latest news.

Next