Advertisement

ಯಾರನ್ನು ರಕ್ಷಿಸುವ ಉದ್ದೇಶವಿಲ್ಲ: ಡೆತ್ ನೋಟ್ ಪ್ರಕರಣಕ್ಕೆ ಸಿಎಂ ಸ್ಪಷ್ಟನೆ

12:27 PM Jan 02, 2023 | Team Udayavani |

ಬೆಂಗಳೂರು: ಡೆತ್ ನೋಟ್ ಬರೆದು ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಮಾಜಿ ಸಚಿವ ಅರವಿಂದ ಲಿಂಬಾವಳಿ ಅವರಿಗೆ ಸಂಕಷ್ಟ ಸೃಷ್ಟಿಸಿದ್ದು, ಕಾನೂನು ಪ್ರಕಾರವೇ ತನಿಖೆ ನಡೆಯಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಿಸಿದ್ದಾರೆ.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೃತರ ಪತ್ನಿ ನೀಡಿದ ದೂರಿನನ್ವಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕಾನೂನು ಪ್ರಕಾರವೇ ತನಿಖೆ ನಡೆಯುವುದರಿಂದ ಸರ್ಕಾರ ಮಧ್ಯಪ್ರವೇಶ ಮಾಡುವ ಪ್ರಶ್ನೆಯೇ ಇಲ್ಲ ಎಂದು ಹೇಳಿದರು.

ದೇಶದ ಕಾನೂನು ಎಲ್ಲರಿಗೂ ಒಂದೇ. ನಿಷ್ಪಕ್ಷಪಾತದ ತನಿಖೆ ನಡೆಯಲಿದ್ದು, ಇದರಲ್ಲಿ ಯಾರೇ ಇದ್ದರೂ ಕಾನೂನು ಪ್ರಕಾರ ಶಿಕ್ಷೆಯಾಗಲಿದೆ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next