Advertisement

ನಾಳೆ ಸಿಎಂ ದೆಹಲಿ ಪ್ರವಾಸ: ಸಚಿವ ಸ್ಥಾನಕಾಂಕ್ಷಿಗಳಲ್ಲಿ ಹೆಚ್ಚಿದ ಕುತೂಹಲ

11:35 AM Apr 04, 2022 | Team Udayavani |

ಬೆಂಗಳೂರು: ಹಲವು ವಾರಗಳಿಂದ ಸಚಿವ ಸ್ಥಾನಕಾಂಕ್ಷಿಗಳ ಕುತೂಹಲಕ್ಕೆ ಕಾರಣವಾಗಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ದೆಹಲಿ ಪ್ರವಾಸಕ್ಕೆ ದಿನಾಂಕ ನಿಗಧಿಯಾಗಿದೆ. ಮಂಗಳವಾರ ಮಧ್ಯಾಹ್ನ 1.55ಕ್ಕೆ ಸಿಎಂ ಬೊಮ್ಮಾಯಿ ದೆಹಲಿ ಪ್ರವಾಸ ಕೈಗೊಳ್ಳಲಿದ್ದಾರೆ.

Advertisement

ಸಿಎಂ ಬೊಮ್ಮಾಯಿ ಅವರಿಗೆ ಸಚಿವ ಗೋವಿಂದ ಕಾರಜೋಳ ಸಾಥ್ ನೀಡಲಿದ್ದಾರೆ. ಕೇಂದ್ರ ಜಲಶಕ್ರಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಭೇಟಿಯಾಗಲಿರುವ ಸಿಎಂ ಮತ್ತು ಸಚಿವ ಕಾರಜೋಳ, ಮೇಕೆದಾಟು ಯೋಜನೆಗೆ ಅನುಮತಿ ಸಂಬಂಧ ಚರ್ಚಿಸಲಿದ್ದಾರೆ.

ಇದನ್ನೂ ಓದಿ:ದಲಿತರ ಸೌಲಭ್ಯ ಕಬಳಿಸಿದ ರೇಣುಕಾಚಾರ್ಯ ವಿರುದ್ಧ ಕ್ರಮ ಕೈಗೊಳ್ಳಲಿ: ಪ್ರಕಾಶ ರಾಠೋಡ

ಆ ನಂತರ ವರಿಷ್ಠರನ್ನು ಭೇಟಿಯಾಗಿ ಸಂಪುಟ ಸರ್ಜರಿ ಬಗ್ಗೆಯೂ ನಿರ್ಧಾರ ಕೈಗೊಳ್ಳಲಿದ್ದಾರೆ. ಸಚಿವ ಸಂಪುಟಕ್ಕೆ ಮೇಜರ್ ಸರ್ಜರಿ ಮಾಡಲಾಗುತ್ತದೆ ಎಂಬ ಮಾತುಗಳು ಹಲವು ವಾರಗಳಿಂದ ಕೇಳಿ ಬರುತ್ತಿದ್ದವು. ಅಧಿವೇಶನ ಮುಗಿದ ನಂತರ ದೆಹಲಿಗೆ ತೆರಳುವುದಾಗಿ ಸಿಎಂ ಹೇಳಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next