Advertisement

ಸಿಎಂ ಬೊಮ್ಮಾಯಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ತುರ್ತು ಭೂಸ್ಪರ್ಶ

09:07 PM Oct 11, 2022 | Team Udayavani |

ಬಳ್ಳಾರಿ: ವಿಜಯನಗರ ಜಿಲ್ಲೆಯ ಹಂಪಿ ಕನ್ನಡ ವಿವಿಯಲ್ಲಿ ಮಂಗಳವಾರ ಸಂಜೆ ಲ್ಯಾಂಡ್‌ ಆಗಬೇಕಿದ್ದ ಸಿಎಂ ಬಸವರಾಜ ಬೊಮ್ಮಾಯಿ ಅವರ ಹೆಲಿಕಾಪ್ಟರ್‌, ಹವಾಮಾನ ವೈಪರೀತ್ಯದಿಂದಾಗಿ ಸಮೀಪದ ಜಿಂದಾಲ್‌ ನಿಲ್ದಾಣದಲ್ಲಿ ಲ್ಯಾಂಡ್‌ ಆಗಿದೆ.

Advertisement

ರಾಯಚೂರು ಜಿಲ್ಲೆಯಲ್ಲಿ ಬಿಜೆಪಿ ಜನಸಂಕಲ್ಪ ಯಾತ್ರೆಗೆ ಚಾಲನೆ ನೀಡಿದ ಸಿಎಂ ಬಸವರಾಜ ಬೊಮ್ಮಾಯಿ, ಅ.12ರಂದು ಹೊಸಪೇಟೆಯಲ್ಲಿ ಚಾಲನೆ ನೀಡುವ ಸಲುವಾಗಿ ಮಂಗಳವಾರ ಸಂಜೆ ಹೆಲಿಕಾಪ್ಟರ್‌ ಮೂಲಕ ಆಗಮಿಸಿದ್ದು, ಈ ವೇಳೆ ಹವಾಮಾನ ವೈಪರೀತ್ಯದಿಂದಾಗಿ ಹಂಪಿ ಕನ್ನಡ ವಿವಿಯ ಹೆಲಿಪ್ಯಾಡ್‌ನ‌ಲ್ಲಿ ಲ್ಯಾಂಡ್‌ ಆಗಲು ಸಾಧ್ಯವಾಗಿಲ್ಲ.

ಇದರಿಂದ ಸಮೀಪದ ಜಿಂದಾಲ್‌ ವಿಮಾನ ನಿಲ್ದಾಣಕ್ಕೆ ಬಂದು ಹೆಲಿಕಾಪ್ಟರ್‌ನ್ನು ಇಳಿಸಲಾಗಿದ್ದು, ಅಲ್ಲಿಂದ ರಸ್ತೆ ಮೂಲಕ ಸಮೀಪದ ಕಮಲಾಪುರಕ್ಕೆ ತೆರಳಿ ಈವಲ್‌ ಬ್ಯಾಕ್‌ ಹೋಟೆಲ್‌ನಲ್ಲಿ ತಂಗಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next