Advertisement

ಬೆಳಗಾವಿಯಲ್ಲಿ ದಿ.‌ಸುರೇಶ ಅಂಗಡಿ ಪ್ರತಿಮೆ ಅನಾವರಣಗೊಳಿಸಿದ ಸಿಎಂ ಬೊಮ್ಮಾಯಿ

12:59 PM Sep 26, 2021 | Team Udayavani |

ಬೆಳಗಾವಿ: ಇಲ್ಲಿಯ ಸಾವಗಾಂವ ರಸ್ತೆಯ ಸುರೇಶ ಅಂಗಡಿ ಶಿಕ್ಷಣ ಸಂಸ್ಥೆ ಆವರಣದಲ್ಲಿ ಕೇಂದ್ರದ ಮಾಜಿ ಸಚಿವ ಹಾಗೂ ಬೆಳಗಾವಿಯ ಸಂಸದರಾಗಿದ್ದ ದಿ. ಸುರೇಶ ಅಂಗಡಿ ಅವರ ಪ್ರತಿಮೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರವಿವಾರ ಅನಾವರಣಗೊಳಿಸಿದರು.

Advertisement

ಸಚಿವರಾದ ಉಮೇಶ ಕತ್ತಿ, ಸಂಸದೆ, ಸುರೇಶ ಅಂಗಡಿ ಅವರ ಪತ್ನಿ ಮಂಗಲಾ ಅಂಗಡಿ, ಜಗದೀಶ ಶೆಟ್ಟರ, ಪ್ರಕಾಶ ಹುಕ್ಕೇರಿ, ಡಾ. ಪ್ರಭಾಕರ ಕೋರೆ, ಶ್ರದ್ಧಾ ಅಂಗಡಿ ಸೇರಿದಂತೆ ಇತರರು ಇದ್ದರು.

ಇದನ್ನೂ ಓದಿ:ಕಾಂಗ್ರೆಸ್‌ನಲ್ಲಿ ಕೂಸು ಹುಟ್ಟುವ ಮುನ್ನ ಕುಲಾವಿ:CMಕುರ್ಚಿ ಮೇಲೆ ಪ್ರಬಲಸಮುದಾಯಗಳ ‘ಟವೆ‌ಲ್‌’

ಇದಕ್ಕೂ ಮೊದಲು ಇಲ್ಲಿಯ ಶಹಾಪುರದ ಶಿವಾಜಿ ಉದ್ಯಾನವನದ ಬಳಿ ಸ್ಮಾರ್ಟ್ ಸಿಟಿ ಯೋಜನೆಯಡಿ ನಿರ್ಮಿಸಲಾಗಿರುವ ಅತ್ಯಾಧುನಿಕ “ರವೀಂದ್ರ ಕೌಶಿಕ್ ಇ-ಗ್ರಂಥಾಲಯ” ವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಲೋಕಾರ್ಪಣೆಗೊಳಿಸಿದರು. ಶಾಸಕ ಅಭಯ ಪಾಟೀಲ ಮೊದಲಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next