Advertisement

ಸಸಿ ನೆಡುವ ಮೂಲಕ ಶಾಲೆ- ಕಾಲೇಜು ಭೌತಿಕ ತರಗತಿ ಪುನಾರಂಭಕ್ಕೆ ಚಾಲನೆ ನೀಡಿದ ಸಿಎಂ

11:29 AM Aug 23, 2021 | Team Udayavani |

ಬೆಂಗಳೂರು: ಶಾಲಾ- ಕಾಲೇಜುಗಳಲ್ಲಿ ಭೌತಿಕ ತರಗತಿ ಆರಂಭದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಬೆಂಗಳೂರಿನ ಮಲ್ಲೇಶ್ವರಂ ಬಡಾವಣೆಯಲ್ಲಿರುವ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ ಭೇಟಿ ನೀಡಿದರು. ಸಸಿ ನೆಡುವ ಮೂಲಕ ಅವರು ಭೌತಿಕ ತರಗತಿಗಳ ಪುನರಾರಂಭಕ್ಕೆ ಚಾಲನೆ ನೀಡಿದರು.

Advertisement

ಕಾಲೇಜಿನಲ್ಲಿ ಭೌತಿಕ ತರಗತಿಗಳು ನಡೆಯುತ್ತಿದ್ದ ಕೊಠಡಿಗಳಿಗೆ ಸಿಎಂ ಭೇಟಿ ನೀಡಿದ್ದರು.‌ ಕೋವಿಡ್ 19 ನಿಯಂತ್ರಣ ಹಿನ್ನೆಲೆಯಲ್ಲಿ ಕೈಗೊಳ್ಳಲಾಗಿರುವ ಸಿದ್ಧತೆಗಳನ್ನು ಪರಿಶೀಲಿಸಿದರು. ಯಾವುದೇ ಆತಂಕ ಇಲ್ಲದೆ ಕಾಲೇಜಿಗೆ ಬನ್ನಿ ಎಂದು ಸಿಎಂ ವಿದ್ಯಾರ್ಥಿಗಳಿಗೆ ಆಹ್ವಾನಿಸಿದರು.‌

ಇದನ್ನೂ ಓದಿ:ಶಾಲಾ- ಕಾಲೇಜುಗಳಿಗೆ ಮಕ್ಕಳನ್ನು ಕಳುಹಿಸಿ: ಸಚಿವ ಈಶ್ವರಪ್ಪ ಮನವಿ

ಕಾಲೇಜು ಆವರಣದಲ್ಲಿ ಸಿಎಂ ಸಸಿ ನೆಟ್ಟು‌, ನೀರು ಹಾಕಿದರು. ಡಾ. ಅಶ್ವಥ್ ನಾರಾಯಣ ಫೌಂಡೇಶನ್ ವತಿಯಿಂದ ವಿದ್ಯಾರ್ಥಿಗಳಿಗೆ ಟ್ಯಾಬ್ ವಿತರಣೆ ಮಾಡಿದರು.

Advertisement

ಈ ಸಂದರ್ಭದಲ್ಲಿ ಶಿಕ್ಷಣ ಸಚಿವ ಬಿ.ಸಿ.ನಾಗೇಶ್, ಉನ್ನತ ಶಿಕ್ಷಣ ಸಚಿವ ಸಿ.ಎನ್.ಅಶ್ವಥ್ ನಾರಾಯಣ ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next