ಚಿಕ್ಕಮಗಳೂರು : ಇಂದು ಕಾಫಿನಾಡು ಚಿಕ್ಕಮಗಳೂರಿಗೆ ಸಿಎಂ ಬಸವರಾಜ್ ಬೊಮ್ಮಾಯಿ ಭೇಟಿಯಾಗಿ ಚಿಕ್ಕಮಗಳೂರು ಹಬ್ಬದಲ್ಲಿ ಭಾಗಿಯಾಗಲಿದ್ದಾರೆ.
ಬೆಳಗ್ಗೆ 11ಕ್ಕೆ ಹೆಲಿಕ್ಯಾಪ್ಟರ್ ಮೂಲಕ ಬೀರೂರಿಗೆ ಆಗಮಿಸಿ, ಆ ಬಳಿಕ ಬೀರೂರಿನಲ್ಲಿ ನಡೆಯಲಿರುವ ಶಾಸಕ ಬೆಳ್ಳಿ ಪ್ರಕಾಶ್ ಮಗಳ ಮದುವೆಯಲ್ಲಿ ಭಾಗಿಯಾಗಲಿದ್ದಾರೆ.
ಮಧ್ಯಾಹ್ನ ಚಿಕ್ಕಮಗಳೂರು ನಗರಕ್ಕೆ ಆಗಮಿಸಲಿರುವ ಸಿಎಂ 3.30ಕ್ಕೆ ಚಿಕ್ಕಮಗಳೂರು ಹಬ್ಬದ ಉತ್ಸವದ ಮೆರವಣಿಗೆಯನ್ನು ವೀಕ್ಷಿಸಿ ಭುವನೇಶ್ವರಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಲಿದ್ದಾರೆ.
ಈ ವೇಳೆ ಕೃಷಿ ಮೇಳೆ ಸೇರಿದಂತೆ ವಿವಿಧ ಮೇಳಕ್ಕೆ ಚಾಲನೆಯನ್ನು ನೀಡಲಿದ್ದಾರೆ. ಸಂಜೆ 6ಕ್ಕೆ ನಗರದ ಸುಭಾಷ್ ಚಂದ್ರ ಬೋಸ್ ಆಟದ ಮೈದಾನದಲ್ಲಿರುವ ಚಂದ್ರದ್ರೋಣ ವೇದಿಕೆಯಲ್ಲಿ ಚಿಕ್ಕಮಗಳೂರು ಹಬ್ಬಕ್ಕೆ ಚಾಲನೆ ನೀಡಲಿದ್ದಾರೆ.
Related Articles
ಕಾರ್ಯಕ್ರಮದ ನಂತರ ಬೆಂಗಳೂರು ತೆರಳಲಿದ್ದಾರೆ.