Advertisement

ಕರಾವಳಿಯ ದೈವ ದೇವರುಗಳ ಮೊರೆ ಹೋದ ಸಿಎಂ ಬೊಮ್ಮಾಯಿ

12:23 AM Apr 13, 2023 | Team Udayavani |

ಮಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಗೆ ಮೊದಲ ಹಂತದ ಪಟ್ಟಿ ಬಿಡುಗಡೆಯಾದ ಕೂಡಲೇ ಸಿಎಂ ಬಸವರಾಜ ಬೊಮ್ಮಾಯಿ ಅವರು ದೇವರ ಮೊರೆ ಹೋಗಿದ್ದಾರೆ.
ಕರಾವಳಿಗೆ ಬುಧವಾರ ಪತ್ನಿಯೊಂದಿಗೆ ಆಗಮಿಸಿದ ಸಿಎಂ ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ ಭೇಟಿ ನೀಡಿದರು. ಸಂಜೆ ಮಂಗಳೂರಿಗೆ ಆಗಮಿಸಿದ ಅವರು ಬಿಜೆಪಿ ಅಭ್ಯರ್ಥಿಗಳಾದ ಡಿ.ವೇದವ್ಯಾಸ ಕಾಮತ್‌, ಡಾ| ವೈ.ಭರತ್‌ ಶೆಟ್ಟಿ ಅವರೊಂದಿಗೆ ಮಾತುಕತೆ ನಡೆಸಿದರು. ಇದೇ ವೇಳೆ ಮನಪಾ ಮಾಜಿ ಮೇಯರ್‌ ಪ್ರೇಮಾನಂದ ಶೆಟ್ಟಿ, ಬಿಜೆಪಿಯ ಮುಖಂಡರಾದ ಜಗದೀಶ್‌ ಶೇಣವ, ಸುಧೀರ್‌ ಶೆಟ್ಟಿ ಕಣ್ಣೂರು ಉಪಸ್ಥಿತರಿದ್ದರು.

Advertisement

ರಾತ್ರಿ ಸಿಎಂ ಅವರು ನಗರದ ಮಹತೋಭಾರ ಶ್ರೀ ಮಂಗಳಾದೇವಿ ದೇವಸ್ಥಾನ, ಕಂಕನಾಡಿ ಶ್ರೀ ಬ್ರಹ್ಮಬೈದರ್ಕಳ ಗರೋಡಿಗೆ ಭೇಟಿಯಿತ್ತರು. ಮಂಗಳೂರಿನ ಖಾಸಗಿ ಹೊಟೇಲ್‌ನಲ್ಲೇ ವಾಸ್ತವ್ಯ ಹೂಡಿದ್ದು ಎ.13ರಂದು ಬೆಳಗ್ಗೆ ಕಟೀಲು ಹಾಗೂ ಕೊಲ್ಲೂರಿಗೆ ಭೇಟಿ ನೀಡುವ ನಿರೀಕ್ಷೆ ಇದೆ.

Advertisement

Udayavani is now on Telegram. Click here to join our channel and stay updated with the latest news.

Next