Advertisement

ಜು.20ರಂದು ಕೆಆರ್ ಎಸ್ ಜಲಾಶಯಕ್ಕೆ ಬಾಗಿನ ಅರ್ಪಿಸಲಿರುವ ಸಿಎಂ ಬೊಮ್ಮಾಯಿ

12:55 PM Jul 18, 2022 | Team Udayavani |

ಮಂಡ್ಯ: ಜಿಲ್ಲೆಯ ಜೀವನಾಡಿಯಾಗಿರುವ ಶ್ರೀರಂಗಪಟ್ಟಣದ ಕೆಆರ್ ಎಸ್ ಜಲಾಶಯಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜು.20ರಂದು ಬಾಗಿನ ಅರ್ಪಿಸಲಿದ್ದಾರೆ.

Advertisement

ಅಂದು ಬೆಳಿಗ್ಗೆ 8.30ಕ್ಕೆ ಮೈಸೂರಿಗೆ ಆಗಮಿಸುವ ಅವರು ಚಾಮುಂಡೇಶ್ವರಿ ದೇವಾಲಯಕ್ಕೆ ಭೇಟಿ ವಿಶೇಷ ಪೂಜೆ ಸಲ್ಲಿಸುವರು. ನಂತರ 11ಕ್ಕೆ ಎಚ್.ಡಿ.ಕೋಟೆಯಲ್ಲಿರುವ ಕಬಿನಿ ಜಲಾಶಯಕ್ಕೆ ಬಾಗಿನ ಅರ್ಪಿಸುವರು.

ಬಳಿಕ ನೇರವಾಗಿ ಕೆಆರ್ ಎಸ್ ಆಗಮಿಸುವ ಸಿಎಂ ಮಧ್ಯಾಹ್ನ 12.10ಕ್ಕೆ ಕಾವೇರಿ ಮಾತೆಗೆ ವಿಶೇಷ ಪೂಜೆ ಸಲ್ಲಿಸಿ ನಂತರ ಜಲಾಶಯಕ್ಕೆ ಬಾಗಿನ ಅರ್ಪಿಸುವರು ಎಂದು ಆಪ್ತ ಕಾರ್ಯದರ್ಶಿ ತಿಳಿಸಿದ್ದಾರೆ.

ಎರಡನೇ ಬಾರಿ ಬಾಗಿನ: ಸಿಎಂ ಬಸವರಾಜ ಬೊಮ್ಮಾಯಿ ಅವರು ಎರಡನೇ ಬಾರಿಗೆ ಜಲಾಶಯಕ್ಕೆ ಬಾಗಿನ ಅರ್ಪಿಸುತ್ತಿದ್ದಾರೆ. ಕಳೆದ ವರ್ಷ ಅ.28ರಂದು ಬಾಗಿನ ಅರ್ಪಿಸಿದ್ದರು. ಈ ಬಾರಿ ಅವಧಿಗೂ ಮುನ್ನವೇ ಜಲಾಶಯ ತುಂಬಿರುವುದರಿಂದ ಜು.20ರಂದು ಬಾಗಿನ ಅರ್ಪಿಸುತ್ತಿದ್ದಾರೆ.

ಇದನ್ನೂ ಓದಿ:ಡಿಕೆ ಶಿವಕುಮಾರ್ ಒಡೆತನದ ಶಾಲೆಗೆ ಬಾಂಬ್ ಬೆದರಿಕೆ

Advertisement

ಕಳೆದ ವರ್ಷ ಜಲಾಶಯ ತುಂಬದ ಹಿನ್ನೆಲೆಯಲ್ಲಿ ಖುದ್ದು ಸಿಎಂ ದಂಪತಿ ಕೆಆರ್ ಎಸ್ ಆಗಮಿಸಿ ಕಾವೇರಿ ಮಾತೆಗೆ ಪೂಜೆ ಸಲ್ಲಿಸಿದ್ದರು. ನಂತರ ಕಾಕತಾಳೀಯ ಎಂಬಂತೆ ಅಕ್ಟೋಬರ್ 28ಕ್ಕೆ ಜಲಾಶಯ ಭರ್ತಿಯಾಗಿತ್ತು.

Advertisement

Udayavani is now on Telegram. Click here to join our channel and stay updated with the latest news.

Next