Advertisement

ಹುಟ್ಟೂರು ಬೂಕನಕೆರೆ ಗೋಗಾಲಮ್ಮನಿಗೆ ಬಿಎಸ್ ಯಡಿಯೂರಪ್ಪ ವಿಶೇಷ ಪೂಜೆ

09:20 AM Jul 28, 2019 | Nagendra Trasi |

ಮಂಡ್ಯ: ಬಿಎಸ್ ಯಡಿಯೂರಪ್ಪ 4ನೇ ಬಾರಿ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬೆನ್ನಲ್ಲೇ ಶನಿವಾರ ಹುಟ್ಟೂರಾದ ಮಂಡ್ಯ ಜಿಲ್ಲೆ ಕೆಆರ್ ಪೇಟೆ ತಾಲೂಕಿನ ಬೂಕನಕೆರೆಗೆ ಭೇಟಿ ನೀಡಿ ಮನೆ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.

Advertisement

ಹುಟ್ಟೂರಿಗೆ ಆಗಮಿಸಿದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರನ್ನು ಕುಟುಂಬಸ್ಥರು ಆರತಿ ಬೆಳಗಿ ಬರಮಾಡಿಕೊಂಡರು. ಈ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತರು ಬಿಎಸ್ ವೈಗೆ ಜಯಕಾರ ಹಾಕುವ ಮೂಲಕ ಘೋಷಣೆ ಕೂಗಿದರು.

ಬೂಕನಕೆರೆ ಗ್ರಾಮದೇವತೆ ಆದಿಶಕ್ತಿ ಗೋಗಾಲಮ್ಮನಿಗೆ ವಿಶೇಷ ಪೂಜೆ ಸಲ್ಲಿಸಿದರು. ನಂತರ ಸಿದ್ದಲಿಂಗೇಶ್ವರ ದೇವಸ್ಥಾನಲ್ಲಿಯೂ ಪೂಜೆ ಸಲ್ಲಿಸಿದರು. ಪೂಜೆ ಬಳಿಕ ಬೂಕನಕೆರೆಯಲ್ಲಿರುವ ತಮ್ಮ ಮನೆಗೆ ತೆರಳಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next