Advertisement

ಕೋವಿಡ್ ನಿಂದ ಸಂಕಷ್ಟಕ್ಕೀಡಾದ ಹೂವು ಬೆಳೆಗಾರರ ಪರಿಹಾರ ಕಾರ್ಯಕ್ಕೆ ಸಿಎಂ ಚಾಲನೆ

02:37 PM Jun 02, 2020 | sudhir |

ಬೆಂಗಳೂರು; ಕೋವಿಡ್ – 19 ನಿಂದಾಗಿ ಸಂಕಷ್ಟಕ್ಕೀಡಾಗಿದ್ದ ಹೂವು ಬೆಳೆಗಾರರಿಗೆ ಪರಿಹಾರ ನೀಡುವ ಕಾರ್ಯಕ್ಕೆ ಸಿಎಂ ಯಡಿಯೂರಪ್ಪ ಇಂದು ಚಾಲನೆ ನೀಡಿದ್ದಾರೆ. ಇದೆ ವೇಳೆ ಪೌರಾಡಳಿತ, ತೋಟಗಾರಿಕೆ ಹಾಗೂ ರೇಷ್ಮೆ ಇಲಾಖೆ ಸಚಿವರ ನೂರುದಿನಗಳ ಸಾಧನೆಯ 64 ಪುಟಗಳ ಪುಸ್ತಕವನ್ನು ಮುಖ್ಯಮಂತ್ರಿ ಯಡಿಯೂರಪ್ಪ ಬಿಡುಗಡೆ ಮಾಡಿದರು.

Advertisement

ಗೃಹ ಕಚೇರಿ ಕೃಷ್ಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಿಎಂ ಯಡಿಯೂರಪ್ಪ ಇಂದು ಹೂವು ಬೆಳೆಗಾರರಿಗೆ ಪರಿಹಾರ ನೀಡು ಕಾರ್ಯಕ್ಕೆ ಚಾಲನೆ ನೀಡಿದರು.12735 ಹೆಕ್ಟೇರ್ ನಲ್ಲಿ ಹೂವು ಬೆಳೆದ ರೈತರಿಗೆ ಪರಿಹಾರವಾಗಿ 31.83 ಕೋಟಿ ರೂ. ಪರಿಹಾರವನ್ನ ಸರ್ಕಾರ ಘೋಷಿಸಿತ್ತು, ಇಂದು ಪರಿಹಾರ ವಿತರಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದೆ. ಈ ವೇಳೆ ತೋಟಗಾರಿಕೆ, ಪೌರಾಡಳಿತ, ರೇಷ್ಮೆ ಸಚಿವ ಡಾ| ನಾರಾಯಣಗೌಡ, ಗೃಹ ಸಚಿವ ಬೊಮ್ಮಾಯಿ, ಕೃಷಿ ಸಚಿವ ಬಿ.ಸಿ.ಪಾಟೀಲ್, ಕಂದಾಯ ಸಚಿವ ಆರ್ ಅಶೋಕ್ ಮತ್ತಿತರು ಉಪಸ್ಥಿತರಿದ್ದರು. ನೂರು ದಿನಗಳ ಸಾಧನೆ ಪುಸ್ತಕದಲ್ಲಿ, ಕೋವಿಡ್-19 ಸಂದರ್ಭದಲ್ಲಿ ರೈತರಿಗೆ ನೆರವಾದ ವಿಚಾರಗಳನ್ನು ವಿವರಿಸಲಾಗಿದೆ. ಮೂರು ಇಲಾಖೆ ಅಡಿಯಲ್ಲಿ ಕೈಗೊಂಡ ಕಾರ್ಯಕ್ರಮದ ಬಗ್ಗೆ ತಿಳಿಸಲಾಗಿದ್ದು, ಹೂವು, ಹಣ್ಣು, ತರಕಾರಿ ಹಾಗೂ ರೇಷ್ಮೆ ಬೆಳೆಗಾರರಿಗೆ ಸರಕಾರ ಘೋಷಿಸಿದ ಅನುದಾನದ ವಿವರವನ್ನು ನೀಡಲಾಗಿದೆ. 50083 ಹೆಕ್ಟೇರ್ ನಲ್ಲಿ ತರಕಾರಿ ಹಾಗೂ 41053 ಹೆಕ್ಟೇರ್ ನಲ್ಲಿ ಹಣ್ಣು ಬೆಳೆದ ರೈತರಿಗೆ 137 ಕೋಟಿ ರೂ. ಪರಿಹಾರ ಘೋಷಣೆ ಮಾಡಲಾಗಿದೆ. ಪೌರಾಡಳಿತ ಇಲಾಖೆ ಅಡಿ ರಾಜ್ಯಾದ್ಯಂತ ಕೋವಿಡ್-19 ಸಂದರ್ಭದಲ್ಲಿ ಕೈಗೊಂಡ ಕ್ರಮದ ಬಗ್ಗೆ ಪುಸ್ತಕದಲ್ಲಿ ವಿವರಣೆ ನೀಡಲಾಗಿದೆ.

ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಸಚಿವ ನಾರಾಯಣಗೌಡ, ರೈತರಿಗೆ ಹೆಚ್ಚಿನ ನೆರವು ನೀಡಿದ ಸಿಎಂ ಯಡಿಯೂರಪ್ಪ ಅವರಿಗೆ ಅಭಿನಂದನೆ ಸಲ್ಲಿದ್ರು. ರೈತರ ಖಾತೆಗೆ ಆನ್ಲೈನ್ ಮೂಲಕ ಹಣ ಹಾಕುವ ಕೆಲಸ ಇಂದಿನಿಂದಲೇ ಪ್ರಾರಂಭ ಆಗಿದೆ. 15-20 ದಿನಗಳಲ್ಲಿ ಎಲ್ಲ ಅರ್ಹ ರೈತರ ಖಾತೆಗೆ ಹಣ ತಲುಪಲಿದೆ. ಕೋವಿಡ್ -19 ನಿಂದ ಸಂಕಷ್ಟದಲ್ಲಿರುವ ಸಂದರ್ಭದಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರ ಹೆಚ್ಚಿನ ನೆರವು ನೀಡಿದೆ. ಮುಖ್ಯಮಂತ್ರಿಗಳು ದಿನ ನಿತ್ಯ 16 ಗಂಟೆ ಕೆಲಸ ಮಾಡುತ್ತಿದ್ದಾರೆ. ಅವರಂತೆ ಸಚಿವರೆಲ್ಲರೂ ಅವಿರತ ಶ್ರಮಿಸುತ್ತಿದ್ದಾರೆ. ಅಲ್ಲದೆ ಮಂಡ್ಯ ಜಿಲ್ಲೆಯಲ್ಲಿ ಕೋವಿಡ್ -19 ನಿಯಂತ್ರಣಕ್ಕಾಗಿ 18 ಕೋಟಿ ರೂ. ಗು ಹೆಚ್ಚು ಹಣ ನೀಡಿದ್ದೇವೆ. ಆದ್ರೆ ಜಿಲ್ಲೆಯ ಶಾಸಕರಿಗೆ ನೇರವಾಗಿ ಅನುದಾನ ನೀಡಲು ಸಾಧ್ಯವಿಲ್ಲ. ಜಿಲ್ಲಾಡಳಿತದ ಮೂಲಕ ಎಲ್ಲ ತಾಲೂಕಿಗೂ ಸಾಕಷ್ಟು ಅನುದಾನ ನೀಡಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

ಜೆಡಿಎಸ್ ಭದ್ರಕೋಟೆಯನ್ನ ಒಡೆಯುವ ಸಲುವಾಗಿ ಹಾಸನಕ್ಕೆ ಜಿಲ್ಲಾ ಉಸ್ತುವಾರಿಯಾಗಿ ಸಚಿವ ಗೋಪಾಲಯ್ಯರನ್ನ ನೇಮಿಸಲಾಗಿದೆಯೇ ಎಂದು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಜೆಡಿಎಸ್ ಭದ್ರಕೋಟೆ ಈಗಾಗಲೆ ಛಿದ್ರವಾಗಿದೆ. ಆ ಬಗ್ಗೆ ಹೆಚ್ಚಿಗೆ ಮಾತಾಡಲ್ಲ ಎಂದು ಸಚಿವ ನಾರಾಯಣ ಗೌಡ ಮಾಧ್ಯಮಕ್ಕೆ ಹೇಳಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next