Advertisement

ಮಠಾಧೀಶರನ್ನು ಭೇಟಿಯಾಗಿ ಆಶೀರ್ವಾದ ಪಡೆದ ಸಿಎಂ ಬಿಎಸ್ ವೈ

01:11 PM Jun 12, 2021 | Suhan S |

ಶಿವಮೊಗ್ಗ: ಸಿಎಂ ಬಿ.ಎಸ್.ಯಡಿಯೂರಪ್ಪ‌ ಶನಿವಾರ ಶಿಕಾರಿಪುರ ತಾಲೂಕಿನ ಕಾಳೇನಹಳ್ಳಿ ಶಿವಯೋಗಾಶ್ರಮದಲ್ಲಿ ಮಠಾಧೀಶರನ್ನು ಭೇಟಿಯಾಗಿ ಆಶೀರ್ವಾದ ಪಡೆದರು.

Advertisement

ಈ ವೇಳೆ ಮಠಾಧೀಶರು‌ ಮಾತಾನಾಡಿದ ಬೆಕ್ಕಿನಕಲ್ಮಠದ ಶ್ರೀ ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮೀಜಿ, ಯಾವುದೇ ಕಾರಣಕ್ಕೂ ನಾಯಕತ್ವ ಬದಲಾವಣೆಯ ವಿಷಯವೇ ಬರಬಾರದು. ನಾಯಕತ್ವ ಬದಲಾವಣೆ ಎಂದರೆ ಕೋವಿಡ್ ಗಿಂತಲೂ ದೊಡ್ಡ ಅನಾಹುತ ಸಂಭವಿಸುತ್ತದೆ.ಯಡಿಯೂರಪ್ಪ ಅವರ ನಾಯಕತ್ವಕ್ಕೆ ಅಡೆತಡೆ ತರುವ ಕೆಲಸವನ್ನು ಯಾರೂ ಮಾಡಬಾರದು.ಒಂದು ವೇಳೆ ಈ ಕೆಲಸ ಮಾಡಿದರೆ ಅದು ತಮ್ಮ ತಲೆ ಮೇಲೆ ತಾವೇ ಕಲ್ಲುಹಾಕಿಕೊಂಡಂತೆ ಎಂದರು.

ಇದನ್ನೂ ಓದಿ: ಚಿಕ್ಕಮಗಳೂರು: ಕೋವಿಡ್ ಸೋಂಕಿತ ಬಾಲಕಿ ಜೊತೆ ಭರ್ಜರಿ ಡ್ಯಾನ್ಸ್ ಮಾಡಿದ ತರೀಕೆರೆ ಶಾಸಕ

ಕಾಳೇನಹಳ್ಳಿ ಶಿವಯೋಗಾಶ್ರಮದ ಶ್ರೀಗಳು ಮೃತಪಟ್ಟಾಗ ಮಠಕ್ಕೆ ಸಿಎಂಗೆ ಭೇಟಿ ನೀಡಲು ಸಾಧ್ಯವಾಗಿರಲಿಲ್ಲ.ಹೀಗಾಗಿ ಇಂದು ಮಠಕ್ಕೆ ಭೇಟಿ ನೀಡಿ ಶ್ರೀಗಳ ಗದ್ದುಗೆ ದರ್ಶನ ಪಡೆದರು.

 

Advertisement

 

Advertisement

Udayavani is now on Telegram. Click here to join our channel and stay updated with the latest news.

Next